ಜಿಲ್ಲೆಗಳು

‘ಯುಜಿ ಕೇಬಲ್ ಅಳವಡಿಕೆ: ಪ್ರತಿ ಕಿ.ಮೀ 60 ಸಾವಿರ ರೂ. ನಿಗದಿ’

ಕಾನೂನು ಅಭಿಪ್ರಾಯ ಪಡೆದು ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳಿಗೆ ಖಾತೆ ಮಾಡಲು ನಿರ್ಧಾರ

ಮೈಸೂರು: ನಗರಪಾಲಿಕೆ ವ್ಯಾಪ್ತಿುಂಲ್ಲಿ ಬೇಕಾಬಿಟ್ಟಿ ಓವರ್ ಹೆಡ್ ಕೇಬಲ್ ಅಳವಡಿಸಿರುವುದನ್ನು ಒಂದು ತಿಂಗಳಿನಲ್ಲಿ ತೆರವುಗೊಳಿಸುವ ಜತೆಗೆ ಪ್ರತಿ ಕಿ.ಮೀ.ಗೆ ಸುಮಾರು 6 ಓಪನ್ ಟ್ರಂಚ್ ಬಳಸಿ ಕೇಬಲ್ ಅಳವಡಿಸಲಾಗುತ್ತಿದ್ದು, ಪ್ರತಿ ಟ್ರಂಚ್‌ಗೆ 10 ಸಾವಿರ ರೂ.ನಂತೆ 1 ಕಿ.ಮೀ.ಗೆ 60 ಸಾವಿರ ರೂ. ದರ ನಿಗದಿಪಡಿಸಲು ಗುರುವಾರ ನಡೆದ ನಗರಪಾಲಿಕೆ ಕೌನ್ಸಿಲ್ ಸಭೆ ಅನುಮೋದನೆ ನೀಡಿತು.
ಎಚ್‌ಡಿಡಿ ಮೂಲಕ ಕೇಬಲ್ ಅಳವಡಿಸಲು ನಗರಪಾಲಿಕೆಯಲ್ಲಿ ದರ ನಿಗದಿಯಾಗಿತ್ತು. ಆದರೆ, ಎಚ್‌ಡಿಡಿ ಮೂಲಕ ಯುಜಿ ಕೇಬಲ್ ಅಳವಡಿಸುವಾಗ ಪ್ರತಿ ಕಿ.ಮೀ.ಗೆ ಸುಮಾರು ೬ ಓಪನ್ ಟ್ರಂಚ್‌ಗಳನ್ನು ತೆಗೆಯಲಾಗುತ್ತಿದೆ. ಆದ್ದರಿಂದ ಪ್ರತಿ ಟ್ರಂಚ್‌ಗೆ ೧೦ ಸಾವಿರ ರೂ.ನಂತೆ ಪ್ರತಿ ಕಿ.ಮೀ.ಗೆ ೬೦ ಸಾವಿರ ರೂ. ದರ ನಿಗದಿಪಡಿಸಲು ತೀರ್ಮಾನಿಸಲಾಯಿತು.
ಕೇಬಲ್ ಅಳವಡಿಕೆ ಸಕ್ರಮಕ್ಕೆ ಜ.೧೫ರ ಗಡುವು: ನಗರದಲ್ಲಿ ಕೇಬಲ್ ಅಳವಡಿಕೆ ಸಂಬಂಧ ನಗರಪಾಲಿಕೆಯಿಂದ ಅನುಮತಿ ಪಡೆಯಲು ಜ.೧೫ರ ಗಡುವು ನೀಡಲಾಗಿದೆ. ಇಂದಿನಿಂದ ಒಂದು ತಿಂಗಳೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಮೂರು ತಿಂಗಳಲ್ಲಿ ಯು.ಜಿ.ಕೇಬಲ್ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳುವುದಕ್ಕೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕಾನೂನು ಅಭಿಪ್ರಾಯನಂತರ ಅನುಷ್ಠಾನ: ನಗರಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳಲ್ಲಿ ನಗರಪಾಲಿಕೆಯಿಂದ ಪ್ರತಿ ಫ್ಲಾಟ್‌ಗಳಿಗೆ ಉಪ ನಂಬರ್ ಪಡೆದು ಪೂರ್ಣ ಪ್ರಮಾಣದಲ್ಲಿ ತೆರಿಗೆ ಪಾವತಿಸಲು ಸಾಧ್ಯವಾಗದ ಕಾರಣ ಕಾನೂನು ಅಭಿಪ್ರಾಯಪಡೆದು ಸ್ವತ್ತುಗಳಿಗೆ ಖಾತೆ ಮಾಡಿಕೊಡಲು ನಿರ್ಧರಿಸಲಾಯಿತು. .ಸಭೆಯಲ್ಲಿ ಉಪ ಮಹಾಪೌರ ಡಾ.ಜಿ. ರೂಪಾ,ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ ಹಾಜರಿದ್ದರು.

ನೀರಿನ ಶುಲ್ಕ ಏರಿಕೆಗೆ ಸರ್ವಾನುಮತದಿಂದ ಒಪ್ಪಿಗೆ
ನಾಲ್ಕು ಯೂನಿಟ್‌ಗಳು ಇರುವಂತಹ ಬಹುಮಹಡಿ ವಸತಿ ಸಮುಚ್ಛಯ ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ಕುಡಿಯುವ ನೀರು ಸರಬರಾಜು ಬೇಡಿಕೆಯನ್ನು ಪೂರೈಸಲು ಮತ್ತು ಒಳಚರಂಡಿ ಸಂಪರ್ಕ ನೀಡಲು ಆಗುತ್ತಿರುವ ಹೊರೆಯನ್ನು ಪಾಲಿಕೆ ಭರಿಸುವುದು ಕಷ್ಟಕರವಾಗಿರುವ ಕಾರಣ ಆಯಾ ಕಟ್ಟಡಗಳ ಮಾಲೀಕರಿಂದ ಪ್ರತಿ ಯೂನಿಟ್‌ಗೆ ೫ ವ್ಯಕ್ತಿಗಳಂತೆ ಲೆಕ್ಕಚಾರ ಮಾಡಿ ಪ್ರೋರೇಟಾ ವೆಚ್ಚವನ್ನು ಹೆಚ್ಚಿಸಲು ತೀರ್ಮಾನಿಸಲಾಯಿತು.


ಕ್ಷೃಮೆಯಾಚನೆ ಪ್ರಹಸನ
ಮೈಸೂರು: ಕಳೆದ ಸಭೆಯಲ್ಲಿ ಮಾಜಿ ಮಹಾಪೌರ ಉಯೂಬ್‌ಖಾನ್ ಅವರು ನಿಮಗೆ ನಾಚಿಕೆ ಆಗಬೇಕು ಎಂದು ನೀಡಿದ್ದ ಹೇಳಿಕೆಗೆ ಕ್ಷೃಮೆ ಕೋರುವಂತೆ ಆಗ್ರಹಿಸಿ ಜಾ.ದಳ ಸದಸ್ಯರು ಗುರುವಾರದ ಸಭೆಯಲ್ಲಿ ಪಟ್ಟುಹಿಡಿದರು. ಅಲ್ಲದೆ ಎಂ.ಶ್ರೀನಿವಾಸ್ ಅವರು ಜಾ.ದಳ ಸದಸ್ಯರನ್ನು ಟೀಕಿಸಿದ್ದನ್ನು ಖಂಡಿಸಿದರು. ಈ ವೇಳೆ ಗದ್ದಲ ಉಂಟಾದ್ದರಿದ ಅರ್ಧ ಗಂಟೆ ಸಭೆ ಮುಂದೂಡಲಾಯಿತು.
ಸಭೆುಂ ಬಳಿಕ ಎಂ.ಶಿವಕುಮಾರ್ ಅವರು, ನನ್ನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಬಳಸಿದ ಪದವನ್ನು ಹಿಂಪಡೆಯುವುದಾಗಿ ಹೇಳಿದರು. ಆದರೆ, ಉಯೂಬ್‌ಖಾನ್ ನಾನು ಅಸಂವಿಧಾನಿಕ ಪದ ಬಳಸಿಲ್ಲವಾದ್ದರಿಂದ ಕ್ಷಮೆ ಕೋರುವುದಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಧ್ಯಪ್ರವೇಶಿಸಿದರೂ ಪ್ರಯೋಜನವಾಗಲಿಲ್ಲ. ಬಳಿಕ ಎಸ್‌ಬಿಎಂ ಮಂಜು, ಕಾಂಗ್ರೆಸ್‌ನವರು ಬರೀ ಸುಳ್ಳು ಹೇಳುತ್ತಾರೆ ಎಂದು ಟೀಕಿಸುವ ಮೂಲಕ ಸೇಡು ತೀರಿಸಿಕೊಂಡರು. ಆಗ ಇಬ್ಬರು ಕ್ಷೃಮೆ ಕೋರದೆ ಸಭೆ ಮುಂದುವರಿಸಿದರು.

 

andolanait

Recent Posts

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

15 mins ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

37 mins ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

59 mins ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

3 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

4 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

4 hours ago