ಹನೂರು: ಕಳೆದ ತಿಂಗಳು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮೊಡನೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಉಮೇಶ್ ಕತ್ತಿ ಹಠಾತ್ ನಿಧನ ನೋವನ್ನು ತಂದಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಅವರು, ಸಚಿವ ಉಮೇಶ್ ವಿಶ್ವನಾಥ್ ಕತ್ತಿಯವರು ದಕ್ಷ ಹಾಗೂ ನೇರನುಡಿಯ ರಾಜಕಾರಣಿಯಾಗಿದ್ದರು. ಕಳೆದ ತಿಂಗಳು 7ಮತ್ತು 8ರಂದು ತಾಲೂಕಿನ ಮೇಕೆದಾಟು ಹಾಗೂ ಗೋಪಿನಾಥಮ್, ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು. ಗೋಪಿನಾಥಂನಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು ಅರಣ್ಯ ಇಲಾಖೆಯ ಆರ್.ಎಫ್. ಒ.ಕಚೇರಿಯನ್ನು ಉದ್ಘಾಟಿಸಿದ್ದರು.
ಮಲೆಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆದು ಪೂಜೆ ಸಲ್ಲಿಸಿ ಅಲ್ಲಿನ ಅಧಿಕಾರಿಗಳ ಜೊತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ಬಳಿಕ ಸಾಲೂರು ಮಠಕ್ಕೆ ತೆರಳಿ ಹಿರಿಯ ಗುರುಸ್ವಾಮಿಗಳ ಆಶೀರ್ವಾದ ಪಡೆದು ಹಿರಿಯ ಶ್ರೀಗಳ ಯೋಗಕ್ಷೇಮವನ್ನು ವಿಚಾರಿಸಿದ್ದರು. ಮಂಗಳವಾರ ರಾತ್ರಿ ದಿಡೀರ್ ಹೃದಯಾಘಾತ ಸಂಭವಿಸಿ ನಿಧನರಾಗಿರುವುದು ನೋವನ್ನು ತಂದಿದೆ. ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರಿಗೆ ಭಗವಂತ ಚಿರಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗದವರು, ಹಿತೈಷಿಗಳು, ಅಭಿಮಾನಿ ಬಳಗಕ್ಕೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…