ಜಿಲ್ಲೆಗಳು

ಉದ್ಯಾನವನದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ : ಆಯುಕ್ತರ ನೇತೃತ್ವದಲ್ಲಿ ತೆರವು ಕಾರ್ಯ ಯಶಸ್ವಿ

ಮೈಸೂರು: ಸಾರ್ವಜನಿಕರ ವಿರೋಧದ ನಡುವೆ ಉದ್ಯಾನವನದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಮುಡಾ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

ಮೈಸೂರಿನ ಬೋಗಾದಿ ಎಸ್‌ಬಿಎಂ ಬಡಾವಣೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಿದ್ದ ಉದ್ಯಾನವನದಲ್ಲಿ ನಾಲ್ಕೈದು ಮಂದಿ ಸೇರಿಕೊಂಡು ಕಟ್ಟಡವನ್ನು ನಿರ್ಮಾಣ ಮಾಡಿದ್ದರು. ಈ ಬಗ್ಗೆ ಸ್ಥಳೀಯರು ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದರಿಂದ ವಲಯ ಆಯುಕ್ತರು ಪರಿಶೀಲಿಸಿ ಮಾಹಿತಿ ಕೊಟ್ಟಿದ್ದರು. ಅದರಂತೆ, ಗುರುವಾರ ಜೆಸಿಬಿ ಯಂತ್ರ,ಲಾರಿ,ಟಿಪ್ಪರ್‌ಗಳ ಸಮೇತ ಸ್ಥಳಕ್ಕೆ ಭೇಟಿ ನೀಡಿದ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಕಾರ್ಯಾಚರಣೆ ನಡೆಸುವ ಮೂಲಕ ತೆರವುಗೊಳಿಸಿದರು.

ಬಳಿಕ,ಕಾನೂನುಬಾಹಿರವಾಗಿ ಕಟ್ಟಡ ನಿರ್ಮಿಸಿದವರ ವಿರುದ್ಧ ಕ್ರಮಕ್ಕೆ ನೋಟಿಸ್‌ಜಾರಿಗೊಳಿಸುವಂತೆ ಸೂಚಿಸಿದರು. ಮತ್ತೊಂದೆಡೆ ದಟ್ಟಗಳ್ಳಿ ಮೂರನೇ ಹಂತ ಮಹಾಮನೆ ಸರ್ಕಲ್ ರಸ್ತೆಯಲ್ಲಿ ಮನೆ ನಿರ್ಮಾಣಕ್ಕಾಗಿ ರಸ್ತೆ ಬದಿಯಲ್ಲಿ ಕಟ್ಟಿದ್ದ ಶೆಡ್‌ಗಳನ್ನು ತೆರವುಗೊಳಿಸದೆ ಇರುವ ಬಗ್ಗೆ ದೂರು ನೀಡಿದ್ದನ್ನು ಸ್ವೀಕರಿಸಿದ್ದ ಆಯುಕ್ತರು ಶೆಡ್‌ಗಳನ್ನು ತೆರವುಗೊಳಿಸುವಂತೆ ನೋಡಿಕೊಂಡರು. ಮನೆ ನಿರ್ಮಾಣ ಮಾಡಿದ ಮೇಲೆ ಶೆಡ್ ತೆರವುಗೊಳಿಸುವಂತೆ ಮಾಲೀಕರಿಗೆ ಮೂರ್ನಾಲ್ಕು ಬಾರಿ ಹೇಳಿದರೂ ಗಮನಹರಿಸದ ಕಾರಣ ಜೆಸಿಬಿ ಯಂತ್ರದಿಂದ ನೆಲಸಮಗೊಳಿಸಲಾಯಿತು. ಈ ಸಂದರ್ಭದಲ್ಲಿ ಅಧೀಕ್ಷಕ ಅಭಿಯಂತರ ಚನ್ನಕೇಶವ, ಕಾರ್ಯಪಾಲಕ ಅಭಿಯಂತರರಾದ ಮೋಹನ್, ಧರ್ಮೇಂದ್ರಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಕಿರಣ್ ಇನ್ನಿತರರು ಹಾಜರಿದ್ದರು.

andolanait

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

6 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

7 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

7 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

8 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

8 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

8 hours ago