ಜಿಲ್ಲೆಗಳು

ಉದ್ಯಾನವನದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ : ಆಯುಕ್ತರ ನೇತೃತ್ವದಲ್ಲಿ ತೆರವು ಕಾರ್ಯ ಯಶಸ್ವಿ

ಮೈಸೂರು: ಸಾರ್ವಜನಿಕರ ವಿರೋಧದ ನಡುವೆ ಉದ್ಯಾನವನದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಮುಡಾ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

ಮೈಸೂರಿನ ಬೋಗಾದಿ ಎಸ್‌ಬಿಎಂ ಬಡಾವಣೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಿದ್ದ ಉದ್ಯಾನವನದಲ್ಲಿ ನಾಲ್ಕೈದು ಮಂದಿ ಸೇರಿಕೊಂಡು ಕಟ್ಟಡವನ್ನು ನಿರ್ಮಾಣ ಮಾಡಿದ್ದರು. ಈ ಬಗ್ಗೆ ಸ್ಥಳೀಯರು ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದರಿಂದ ವಲಯ ಆಯುಕ್ತರು ಪರಿಶೀಲಿಸಿ ಮಾಹಿತಿ ಕೊಟ್ಟಿದ್ದರು. ಅದರಂತೆ, ಗುರುವಾರ ಜೆಸಿಬಿ ಯಂತ್ರ,ಲಾರಿ,ಟಿಪ್ಪರ್‌ಗಳ ಸಮೇತ ಸ್ಥಳಕ್ಕೆ ಭೇಟಿ ನೀಡಿದ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಕಾರ್ಯಾಚರಣೆ ನಡೆಸುವ ಮೂಲಕ ತೆರವುಗೊಳಿಸಿದರು.

ಬಳಿಕ,ಕಾನೂನುಬಾಹಿರವಾಗಿ ಕಟ್ಟಡ ನಿರ್ಮಿಸಿದವರ ವಿರುದ್ಧ ಕ್ರಮಕ್ಕೆ ನೋಟಿಸ್‌ಜಾರಿಗೊಳಿಸುವಂತೆ ಸೂಚಿಸಿದರು. ಮತ್ತೊಂದೆಡೆ ದಟ್ಟಗಳ್ಳಿ ಮೂರನೇ ಹಂತ ಮಹಾಮನೆ ಸರ್ಕಲ್ ರಸ್ತೆಯಲ್ಲಿ ಮನೆ ನಿರ್ಮಾಣಕ್ಕಾಗಿ ರಸ್ತೆ ಬದಿಯಲ್ಲಿ ಕಟ್ಟಿದ್ದ ಶೆಡ್‌ಗಳನ್ನು ತೆರವುಗೊಳಿಸದೆ ಇರುವ ಬಗ್ಗೆ ದೂರು ನೀಡಿದ್ದನ್ನು ಸ್ವೀಕರಿಸಿದ್ದ ಆಯುಕ್ತರು ಶೆಡ್‌ಗಳನ್ನು ತೆರವುಗೊಳಿಸುವಂತೆ ನೋಡಿಕೊಂಡರು. ಮನೆ ನಿರ್ಮಾಣ ಮಾಡಿದ ಮೇಲೆ ಶೆಡ್ ತೆರವುಗೊಳಿಸುವಂತೆ ಮಾಲೀಕರಿಗೆ ಮೂರ್ನಾಲ್ಕು ಬಾರಿ ಹೇಳಿದರೂ ಗಮನಹರಿಸದ ಕಾರಣ ಜೆಸಿಬಿ ಯಂತ್ರದಿಂದ ನೆಲಸಮಗೊಳಿಸಲಾಯಿತು. ಈ ಸಂದರ್ಭದಲ್ಲಿ ಅಧೀಕ್ಷಕ ಅಭಿಯಂತರ ಚನ್ನಕೇಶವ, ಕಾರ್ಯಪಾಲಕ ಅಭಿಯಂತರರಾದ ಮೋಹನ್, ಧರ್ಮೇಂದ್ರಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಕಿರಣ್ ಇನ್ನಿತರರು ಹಾಜರಿದ್ದರು.

andolanait

Recent Posts

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

2 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

16 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

19 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

20 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

21 hours ago