ಜಿಲ್ಲೆಗಳು

ಅವೈಜ್ಞಾನಿಕ ರೈಲ್ವೆ ಅಂಡರ್ ಪಾಸ್: ಪಾಲಿಕೆ ಸದಸ್ಯರ ಪ್ರತಿಭಟನೆ

ಮೈಸೂರು: ನಗರದಿಂದ ಕೆಆರ್‌ಎಸ್‌ಗೆ ಸಾಗುವ ಮಾರ್ಗದಲ್ಲಿರುವ ರಿಂಗ್ ರಸ್ತೆಯ ಬಲಭಾಗದಿಂದ ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಮೂರು ಕಡೆ ರೈಲ್ವೆ ಮಲ್ಸೇತುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶುಕ್ರವಾರ ನಗರದ ಮೇಟಗಳ್ಳಿ ಬಳಿಯ ವರ್ತುಲ ರಸ್ತೆಯ ಬಳಿ ಸ್ಥಳೀಯರೊಂದಿಗೆ ಆಗಮಿಸಿದ ಶ್ರೀಧರ್, ಪ್ರೇಮಾ ಶಂಕರೇಗೌಡ ಅವರು ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಶ್ರೀಧರ್, ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪೈಕಿ ಬೆಂಗಳೂರು ನಂತರ ಸಾಂಸ್ಕೃತಿಕ ನಗರಿ ಮೈಸೂರು ಸ್ಥಾನ ಪಡೆದುಕೊಂಡಿದೆ. ಇಲ್ಲಿ ಕೈಗಾರಿಕಾ ಕ್ರಾಂತಿ ಒಂದೆಡೆಯಾದರೆ, ಅದಕ್ಕೆ ಪರ್ಯಾಯವಾಗಿ ಪ್ರವಾಸೋದ್ಯಮ ವಲಯ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವುದನ್ನು ದಾಖಲೆಗಳೇ ದೃಢೀಕರಿಸುತ್ತವೆ ಎಂದರು.
ಆದರೆ, ಇಂದು ಮೈಸೂರು ಅಪಘಾತಗಳ ವಲಯವಾಗಿ ಮಾರ್ಪಟ್ಟಿರುವುದನ್ನು ಪೊಲೀಸ್ ಇಲಾಖೆಯಲ್ಲಿ ಪ್ರಕರಣಗಳೇ ಸಾಕ್ಷೀಕರಿಸುತ್ತಿವೆ. ಅಧಿಕಾರಿ ವಲಯದ ಅಸಡ್ಡೆ ಪರಿಣಾಮ ಮೈಸೂರು ನಗರದಲ್ಲಿ ನಿತ್ಯ ಅಪಘಾತ ಸಂಭವಿಸುತ್ತಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಆರ್‌ಎಸ್‌ಗೆ ಸಾಗುವ ಮಾರ್ಗದಲ್ಲಿರುವ ರಿಂಗ್ ರಸ್ತೆಯ ಬಲಭಾಗದಿಂದ ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಮೂರು ಕಡೆ ಅಂಡರ್ ಪಾಸ್ ರೈಲ್ವೆ ಮಲ್ಸೇತುವೆಗಳಿವೆ. ೧೫ ವರ್ಷಗಳ ಹಿಂದೆ ರೂಪಿಸಿದ ಅವೈಜ್ಞಾನಿಕ ಯೋಜನೆಯಿಂದಾಗಿ ಇಂದು ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ ಎಂದರು.

ರಿಂಗ್ ರಸ್ತೆಯನ್ನು ೪ ಪಥದ ರಸ್ತೆಯನ್ನಾಗಿ ೧೫ ವರ್ಷದ ಹಿಂದೆ ನಿರ್ಮಿಸಿದ್ದು, ಅರಸೀಕೆರೆ ಸಾಗುವ ರೈಲ್ವೆ ಮಾರ್ಗ, ಬೆಲವತ್ತ ರೈಲ್ವೆ ಮಾರ್ಗ ಹಾಗೂ ಆರ್‌ಬಿಐ ಸಮೀಪದ ರೈಲ್ವೆ ಮಾರ್ಗ ಸೇರಿದಂತೆ ಮೂರೂ ರೈಲ್ವೆ ಟ್ರ್ಯಾಕ್ ಅಂಡರ್ ಪಾಸ್ ಬಳಿ ರಸ್ತೆಯನ್ನು ೪ ಪಥದ ಬದಲು ೨ ಪಥಕ್ಕೆ ಇಳಿಸಲಾಗಿದೆ. ಇದರಿಂದ ವಾಹನ ಸವಾರರು ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ನಿರಂತರವಾಗಿ ಅಪಘಾತಗಳಾಗಿ ಸಾವು, ನೋವುಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು.
ಮುಂದಾಲೋಚನೆ ಹಾಗೂ ದೂರದೃಷ್ಟಿತ್ವ ಇಲ್ಲದ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ ಪರಿಣಾಮ ಆಗುತ್ತಿರುವ ಅನಾಹುತಗಳಿಗೆ ಹೊಣೆ ಯಾರು ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಮೈಸೂರಿಗೆ ಹೆಚ್ಚಾಗಿ ಪ್ರವಾಸಿಗರು ಬರುವುದರಿಂದ ಅವರಿಗೆ ಈ ಬಗ್ಗೆ ಗೊತ್ತಿರುವುದಿಲ್ಲ ಎಂದು ಹೇಳಿದರು.

ವರ್ತುಲ ರಸ್ತೆಯಲ್ಲಿ ಎರಡೂ ಬದಿಯಿಂದ ವೇಗವಾಗಿ ಬರುವ ವಾಹನಗಳು ದಾರಿ ಚಿಕ್ಕದಾಗಿರುವುದನ್ನು ಗಮನಿಸದೆ ಹಲವು ಬಾರಿ ಅಪಘಾತಗಳು ಸಂಭವಿಸಿ ಸಾವು, ನೋವುಗಳು ಉಂಟಾಗುತ್ತಿವೆ. ಅಮೂಲ್ಯ ಜೀವಗಳ ಸಾವಿನ ಸರಣಿ ಇಲ್ಲಿ ಮುಂದುವರಿದಿದೆ. ಹಾಗಾಗಿ, ಮೂರೂ ಭಾಗದಲ್ಲಿರುವ ರೈಲ್ವೆ ಅಂಡರ್ ಪಾಸ್ ಸೇತುವೆಯನ್ನು ವಿಸ್ತರಿಸಿ ನಾಲ್ಕು ಪಥದ ರಸ್ತೆಯನ್ನಾಗಿ ಮಾಡಲೇಬೇಕು. ಇಲ್ಲವಾದರೆ, ಇನ್ನಷ್ಟು ಅಮಾಯಕ ಜೀವಗಳು ಬಲಿಯಾಗುವುದರಲ್ಲಿ ಯಾವುದೇ ರೀತಿಯ ಅನುಮಾನ ಇಲ್ಲವಾಗಿದೆ ಎಂದು ಹೇಳಿದರು.

ಕೆಆರ್‌ಎಸ್ ಮಾರ್ಗದಲ್ಲಿ ಮುಂದುವರೆದರೆ ಕಾಫಿ ಬೋರ್ಡ್ ಸಮೀಪ ಲೆವೆಲ್ ಕ್ರಾಸಿಂಗ್‌ನಲ್ಲಿ ಇದೇ ಪರಿಸ್ಥಿತಿ ಇದ್ದು, ನಿತ್ಯ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಲೇ ಇವೆ. ದಸರಾ ವೇಳೆ ಉಂಟಾಗುವ ವಾಹನಗಳ ದಟ್ಟಣೆಯಿಂದ ನೂರಾರು ವಾಹನಗಳು ಕಿಲೋಮೀಟರ್ ದೂರಕ್ಕೆ ಸಾಲುಗಟ್ಟಿ ನಿಲ್ಲುವುದು ಸಾಮಾನ್ಯವಾಗಿದೆ. ಆದಕಾರಣ, ಈ ಭಾಗದಲ್ಲಿ ತುರ್ತಾಗಿ ಮೇಲ್ಸೇತುವೆ ಆಗಬೇಕಿದೆ ಎಂದು ಆಗ್ರಹಿಸಿದರು.

ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್, ಶಿವಣ್ಣ, ರಮೇಶ್, ರಾಮಕೃಷ್ಣ, ಪ್ರಸನ್ನ, ಸ್ವಾಮೀಗೌಡ, ರವಿ, ರಾಮಚಂದ್ರ, ಬೋರೇಗೌಡ, ಈಶ್ವರ, ಶಿವಣ್ಣ, ದಿನೇಶ್, ಕೃಷ್ಣಪ್ಪ, ಪ್ರಭಾಲರ ಮುಂತಾದವರು ಸ್ಥಳದಲ್ಲಿದ್ದರು.

andolanait

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

9 mins ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

34 mins ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

1 hour ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

1 hour ago

ಬಿರುಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ತೆಂಗಿನ ಮರಗಳು.

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…

2 hours ago

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

4 hours ago