ಮೈಸೂರು: ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದಾಗಿ ನೂತನ ಕುಲಪತಿ ನೇಮಕ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರು ವಿವಿ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು, ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ 71 ಮಂದಿಯಲ್ಲಿ ಮೂವರ ಹೆಸರನ್ನು ಪರಿಗಣಿಸಿ ಉಳಿದವರ 68 ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಇದರಲ್ಲಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರ ಅರ್ಜಿಯನ್ನೂ ತಿರಸ್ಕರಿಸಲಾಗಿತ್ತು. ತಿರಸ್ಕಾರ ಮಾಡುವಾಗ ತಮ್ಮ ವಿರುದ್ಧದ ಮೊಕದ್ದಮೆ ವಿಚಾರಣೆಯಲ್ಲಿ ಬಾಕಿ ಉಳಿದಿದೆ ಎನ್ನುವ ಅಂಶವನ್ನು ಗುರುತುಮಾಡಿದ್ದರು. ಆದರೆ, ತಮ್ಮ ವಿರುದ್ಧ ಯಾವುದೇ ಪ್ರಕರಣ ಅಥವಾ ವಿಚಾರಣೆ ಇಲ್ಲವೆಂದು ಹೇಳಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಮೈಸೂರು ವಿವಿ ಕುಲಪತಿ ನೇಮಕಾತಿಗೆ ಸಂಬಂಧಪಟ್ಟಂತೆ ತಡೆಯಾಜ್ಞೆ ಕೊಡುವ ಜತೆಗೆ ರಾಜ್ಯಸರ್ಕಾರ ಹೊರಡಿಸಿದ್ದ ಅಧಿಸೂಚನೆ ದಿನಾಂಕ: ೦೮.೧೧.೨೦೨೨ರ ಸಂಖ್ಯೆ ಇಡಿ ೫೭ ಯುಎಂವಿ ೨೦೨೨ರ ವಿಚಾರಣೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.
ವಿಳಂಬ ಸಾಧ್ಯತೆ: ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವ ತನಕ ವಿಳಂಬವಾಗುವ ಸಂಭವವಿದೆ. ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡು ದಾಖಲೆ ಸಲ್ಲಿಸುವ ತನಕ ಪೂರ್ಣಾವಧಿ ಕುಲಪತಿ ನೇಮಿಸುವುದಕ್ಕೆ ಅಡ್ಡಿಯಾಗಲಿದೆ.
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…
ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ…
ಮೈಸೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಒಪ್ಪುತ್ತೇವೆ ಎಂದು ಶಾಸಕ ತನ್ವೀರ್ಸೇಠ್ ಹೇಳಿದರು. 5…
ಮೈಸೂರು : ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ವಸೂಲಾಗುವ ಶುಲ್ಕದ ಮೊತ್ತದಲ್ಲಿ ಶೇ.50ರಷ್ಟು ಸರ್ಕಾರಕ್ಕೆ ಮತ್ತು ಇಲಾಖೆಯಲ್ಲಿ ಬಳಸಲಾಗುತ್ತಿದ್ದು, ಅದೇ…
ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ…
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…