ಜಿಲ್ಲೆಗಳು

ಮೈಸೂರು ವಿವಿ : ಕುಲಪತಿ ನೇಮಕ, ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದಾಗಿ ನೂತನ ಕುಲಪತಿ ನೇಮಕ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರು ವಿವಿ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು, ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ 71 ಮಂದಿಯಲ್ಲಿ ಮೂವರ ಹೆಸರನ್ನು ಪರಿಗಣಿಸಿ ಉಳಿದವರ 68 ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಇದರಲ್ಲಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರ ಅರ್ಜಿಯನ್ನೂ ತಿರಸ್ಕರಿಸಲಾಗಿತ್ತು. ತಿರಸ್ಕಾರ ಮಾಡುವಾಗ ತಮ್ಮ ವಿರುದ್ಧದ ಮೊಕದ್ದಮೆ ವಿಚಾರಣೆಯಲ್ಲಿ ಬಾಕಿ ಉಳಿದಿದೆ ಎನ್ನುವ ಅಂಶವನ್ನು ಗುರುತುಮಾಡಿದ್ದರು. ಆದರೆ, ತಮ್ಮ ವಿರುದ್ಧ ಯಾವುದೇ ಪ್ರಕರಣ ಅಥವಾ ವಿಚಾರಣೆ ಇಲ್ಲವೆಂದು ಹೇಳಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಮೈಸೂರು ವಿವಿ ಕುಲಪತಿ ನೇಮಕಾತಿಗೆ ಸಂಬಂಧಪಟ್ಟಂತೆ ತಡೆಯಾಜ್ಞೆ ಕೊಡುವ ಜತೆಗೆ ರಾಜ್ಯಸರ್ಕಾರ ಹೊರಡಿಸಿದ್ದ ಅಧಿಸೂಚನೆ ದಿನಾಂಕ: ೦೮.೧೧.೨೦೨೨ರ ಸಂಖ್ಯೆ ಇಡಿ ೫೭ ಯುಎಂವಿ ೨೦೨೨ರ ವಿಚಾರಣೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ವಿಳಂಬ ಸಾಧ್ಯತೆ: ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವ ತನಕ ವಿಳಂಬವಾಗುವ ಸಂಭವವಿದೆ. ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡು ದಾಖಲೆ ಸಲ್ಲಿಸುವ ತನಕ ಪೂರ್ಣಾವಧಿ ಕುಲಪತಿ ನೇಮಿಸುವುದಕ್ಕೆ ಅಡ್ಡಿಯಾಗಲಿದೆ.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

5 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

5 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

6 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago