ಜಿಲ್ಲೆಗಳು

ಮೈಸೂರು ವಿವಿ : ಕುಲಪತಿ ನೇಮಕ, ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದಾಗಿ ನೂತನ ಕುಲಪತಿ ನೇಮಕ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರು ವಿವಿ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು, ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ 71 ಮಂದಿಯಲ್ಲಿ ಮೂವರ ಹೆಸರನ್ನು ಪರಿಗಣಿಸಿ ಉಳಿದವರ 68 ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಇದರಲ್ಲಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರ ಅರ್ಜಿಯನ್ನೂ ತಿರಸ್ಕರಿಸಲಾಗಿತ್ತು. ತಿರಸ್ಕಾರ ಮಾಡುವಾಗ ತಮ್ಮ ವಿರುದ್ಧದ ಮೊಕದ್ದಮೆ ವಿಚಾರಣೆಯಲ್ಲಿ ಬಾಕಿ ಉಳಿದಿದೆ ಎನ್ನುವ ಅಂಶವನ್ನು ಗುರುತುಮಾಡಿದ್ದರು. ಆದರೆ, ತಮ್ಮ ವಿರುದ್ಧ ಯಾವುದೇ ಪ್ರಕರಣ ಅಥವಾ ವಿಚಾರಣೆ ಇಲ್ಲವೆಂದು ಹೇಳಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಮೈಸೂರು ವಿವಿ ಕುಲಪತಿ ನೇಮಕಾತಿಗೆ ಸಂಬಂಧಪಟ್ಟಂತೆ ತಡೆಯಾಜ್ಞೆ ಕೊಡುವ ಜತೆಗೆ ರಾಜ್ಯಸರ್ಕಾರ ಹೊರಡಿಸಿದ್ದ ಅಧಿಸೂಚನೆ ದಿನಾಂಕ: ೦೮.೧೧.೨೦೨೨ರ ಸಂಖ್ಯೆ ಇಡಿ ೫೭ ಯುಎಂವಿ ೨೦೨೨ರ ವಿಚಾರಣೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ವಿಳಂಬ ಸಾಧ್ಯತೆ: ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವ ತನಕ ವಿಳಂಬವಾಗುವ ಸಂಭವವಿದೆ. ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡು ದಾಖಲೆ ಸಲ್ಲಿಸುವ ತನಕ ಪೂರ್ಣಾವಧಿ ಕುಲಪತಿ ನೇಮಿಸುವುದಕ್ಕೆ ಅಡ್ಡಿಯಾಗಲಿದೆ.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

7 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

8 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

12 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago