ಮೈಸೂರು: ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದಾಗಿ ನೂತನ ಕುಲಪತಿ ನೇಮಕ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರು ವಿವಿ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು, ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ 71 ಮಂದಿಯಲ್ಲಿ ಮೂವರ ಹೆಸರನ್ನು ಪರಿಗಣಿಸಿ ಉಳಿದವರ 68 ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಇದರಲ್ಲಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರ ಅರ್ಜಿಯನ್ನೂ ತಿರಸ್ಕರಿಸಲಾಗಿತ್ತು. ತಿರಸ್ಕಾರ ಮಾಡುವಾಗ ತಮ್ಮ ವಿರುದ್ಧದ ಮೊಕದ್ದಮೆ ವಿಚಾರಣೆಯಲ್ಲಿ ಬಾಕಿ ಉಳಿದಿದೆ ಎನ್ನುವ ಅಂಶವನ್ನು ಗುರುತುಮಾಡಿದ್ದರು. ಆದರೆ, ತಮ್ಮ ವಿರುದ್ಧ ಯಾವುದೇ ಪ್ರಕರಣ ಅಥವಾ ವಿಚಾರಣೆ ಇಲ್ಲವೆಂದು ಹೇಳಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಮೈಸೂರು ವಿವಿ ಕುಲಪತಿ ನೇಮಕಾತಿಗೆ ಸಂಬಂಧಪಟ್ಟಂತೆ ತಡೆಯಾಜ್ಞೆ ಕೊಡುವ ಜತೆಗೆ ರಾಜ್ಯಸರ್ಕಾರ ಹೊರಡಿಸಿದ್ದ ಅಧಿಸೂಚನೆ ದಿನಾಂಕ: ೦೮.೧೧.೨೦೨೨ರ ಸಂಖ್ಯೆ ಇಡಿ ೫೭ ಯುಎಂವಿ ೨೦೨೨ರ ವಿಚಾರಣೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.
ವಿಳಂಬ ಸಾಧ್ಯತೆ: ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವ ತನಕ ವಿಳಂಬವಾಗುವ ಸಂಭವವಿದೆ. ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡು ದಾಖಲೆ ಸಲ್ಲಿಸುವ ತನಕ ಪೂರ್ಣಾವಧಿ ಕುಲಪತಿ ನೇಮಿಸುವುದಕ್ಕೆ ಅಡ್ಡಿಯಾಗಲಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…