ಹನೂರು: ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಮಲೆಮಹದೇಶ್ವರ ಬೆಟ್ಟ ಪೊಲೀಸರು ಅಂತ್ಯಕ್ರಿಯೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ರಂಗಮಂದಿರದಲ್ಲಿ ಕಳೆದ 3ದಿನಗಳಿಂದ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಯಾಗದಿದ್ದರಿಂದ ಶವವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಶೈತ್ಯಗಾರದಲ್ಲಿ ಇರಿಸಲಾಗಿತ್ತು.3 ದಿನಗಳು ಕಳೆದರೂ ಸಹ ಯಾರೊಬ್ಬ ವಾರಸುದಾರರೂ ಬಾರದೆ ಇದ್ದರಿಂದ ಮ ಬೆಟ್ಟ ಪೊಲೀಸ್ ಠಾಣಾ ಎಎಸ್ಸೈ ಮಾದಪ್ಪ ಹಾಗೂ ಬಸವರಾಜೇಂದ್ರ ಹಾಗೂ ಇನ್ನಿತರರು ಚಾಮರಾಜನಗರ ಜಿಲ್ಲಾ ಕೇಂದ್ರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.ಈ ಮೂಲಕ ಪೊಲೀಸರು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…