ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವ ವೇಳೆ ಮಹಿಳೆಯೊಬ್ಬಳು ತಾಯಿಯೊಬ್ಬಳು ಹಿಡಿದುಕೊಳ್ಳಲು ಕೊಟ್ಟ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ತಿ ನರಸೀಪುರ ತಾಲೂಕಿ ವಡ್ಡರಕೊಪ್ಪಲಿನ ಶಿವಕುಮಾರ್ ಅವರ ಪತ್ನಿ ಸವಿತಾ ಎಂಬುವವರು ಮಗು ಕಳೆದುಕೊಂಡಿದ್ದಾರೆ.
ನಿನ್ನೆ ( ಜನವರಿ 8 ) ಚನ್ನಪಟ್ಟಣದಿಂದ ತಿ ನರಸೀಪುರಕ್ಕೆ ಮಗುವಿನ ಜತೆ ತೆರಳುತ್ತಿದ್ದ ಸವಿತಾ ಜನಸಂದಣಿಯಿದ್ದ ಕಾರಣ ಸೀಟ್ನಲ್ಲಿ ಕುಳಿತಿದ್ದ ಅಪರಿಚಿತ ಮಹಿಳೆಯೊಬ್ಬರಿಗೆ ತನ್ನ ಮಗುವನ್ನು ನೀಡಿದ್ದಾರೆ. ಇನ್ನು ಸವಿತಾ ಮಳವಳ್ಳಿಯಲ್ಲಿ ಇಳಿದು ಬಸ್ ಬದಲಿಸಲು ಮುಂದಾದಾಗ ಆಕೆಯೂ ಸಹ ಇಳಿಯುವ ನಾಟಕವಾಡಿ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಾಳೆ. ಮಗು ಕಾಣದೇ ಕಂಗಾಲಾದ ಸವಿತಾ ಬಸ್ ನಿಲ್ದಾಣದಲ್ಲಿ ಕಣ್ಣೀರು ಹಾಕಿದ್ದಾರೆ. ಮಾಹಿತಿ ಪಡೆದುಕೊಂಡ ಪಟ್ಟಣ ಪೊಲೀಸರು ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…