ಜಿಲ್ಲೆಗಳು

ಯಶಸ್ವಿನಿ ಯೋಜನೆಗೆ ಅಭೂತಪೂರ್ವ ಸ್ಪಂದನೆ : ಎಸ್.ಟಿ.ಸೋಮಶೇಖರ್

ಮೈಸೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದು ಈ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಯಶಸ್ವಿನಿ ಯೋಜನೆ ಕುರಿತು ಮಾತನಾಡಿದ ಸಚಿವರು, ಜನವರಿ ಅಂತ್ಯದವರೆಗೆ 30 ಲಕ್ಷ ಸದಸ್ಯರ ಗುರಿಗೆ ಎದುರಾಗಿ 33.10 ಲಕ್ಷ ಸದಸ್ಯರನ್ನು ನೋಂದಾಯಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸದಸ್ಯರ ನೋಂದಣಿ ಕಾರ್ಯ ಮುಂದುವರೆಯುತ್ತಿರುವುದರ ಜೊತೆಗೆ 27 ಜಿಲ್ಲೆಗಳಲ್ಲಿನ 127 ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಜನವರಿ ಒಂದೇ ತಿಂಗಳಲ್ಲಿ 1000ಕ್ಕೂ ಹೆಚ್ಚು ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಯಶಸ್ವಿನಿ ಯೋಜನೆಯಡಿ ಇದುವರೆಗೂ ರಾಜ್ಯಾದ್ಯಂತ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ 474 ನೆಟ್‌ವರ್ಕ್ ಆಸ್ಪತ್ರೆಗಳು ಟ್ರಸ್ಟ್ ನಲ್ಲಿ ನೋಂದಾಯಿಸಿಕೊಂಡಿವೆ. ಜನವರಿ 1ರಿಂದಲೇ ಫಲಾನುಭವಿಗಳಿಗೆ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ‌. ಹೃದಯ ಸಂಬಂಧಿ ಕಾಯಿಲೆ, ಕಿವಿ, ಮೂಗು, ಗಂಟಲು ವ್ಯಾದಿಗಳು, ನರ, ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಇತ್ಯಾದಿ ರೋಗಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದಸ್ಯರು ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಹಾಜರುಪಡಿಸಿ 1650 ಚಿಕಿತ್ಸೆಗಳನ್ನು ನಗದುರಹಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿಂದಿನ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ದರ ಹೆಚ್ಚಿದ್ದಲ್ಲಿ ಆ ದರವನ್ನು ಅಥವಾ ಪ್ರಸ್ತುತ ಯೋಜನೆಗೆ ಪರಿಗಣಿಸಿರುವ ಆಯುಷ್ಮಾನ ಭಾರತ ಚಿಕಿತ್ಸೆ ದರಗಳು ಹೆಚ್ಚಿದ್ದಲ್ಲಿ ಅವುಗಳನ್ನು ಪರಿಗಣಿಸಲು ಆದೇಶವಾಗಿರುತ್ತದೆ. ಅಂದರೆ ಯಾವ ಯೋಜನೆಯಲ್ಲಿ ಹೆಚ್ಚಿನ ದರ ಇರುತ್ತದೆಯೋ ಆ ದರವನ್ನು ಪರಿಗಣಿಸಿ ಆಸ್ಪತ್ರೆಗಳ ಬಿಲ್ ಗಳನ್ನು ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.

ನೆಟ್ ವರ್ಕ್ ಆಸ್ಪತ್ರೆಗಳು ಬಿಲ್ಲುಗಳು ಸಲ್ಲಿಸಿದ ಒಂದು ತಿಂಗಳೊಳಗೆ ಅವುಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ಕಂತಿನ ಬಿಲ್ ಅನ್ನು ಫೆಬ್ರವರಿ 15ರೊಳಗೆ ಪಾವತಿ ಮಾಡಲು ಉದ್ದೇಶಿಸಲಾಗಿದೆ. ತದನಂತರ ಮುಂದಿನ ಬಿಲ್ ಗಳನ್ನು ಪ್ರತಿ ತಿಂಗಳು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

3 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

5 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

11 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

11 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

11 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

11 hours ago