ಜಿಲ್ಲೆಗಳು

ಯಶಸ್ವಿನಿ ಯೋಜನೆಗೆ ಅಭೂತಪೂರ್ವ ಸ್ಪಂದನೆ : ಎಸ್.ಟಿ.ಸೋಮಶೇಖರ್

ಮೈಸೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದು ಈ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಯಶಸ್ವಿನಿ ಯೋಜನೆ ಕುರಿತು ಮಾತನಾಡಿದ ಸಚಿವರು, ಜನವರಿ ಅಂತ್ಯದವರೆಗೆ 30 ಲಕ್ಷ ಸದಸ್ಯರ ಗುರಿಗೆ ಎದುರಾಗಿ 33.10 ಲಕ್ಷ ಸದಸ್ಯರನ್ನು ನೋಂದಾಯಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸದಸ್ಯರ ನೋಂದಣಿ ಕಾರ್ಯ ಮುಂದುವರೆಯುತ್ತಿರುವುದರ ಜೊತೆಗೆ 27 ಜಿಲ್ಲೆಗಳಲ್ಲಿನ 127 ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಜನವರಿ ಒಂದೇ ತಿಂಗಳಲ್ಲಿ 1000ಕ್ಕೂ ಹೆಚ್ಚು ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಯಶಸ್ವಿನಿ ಯೋಜನೆಯಡಿ ಇದುವರೆಗೂ ರಾಜ್ಯಾದ್ಯಂತ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ 474 ನೆಟ್‌ವರ್ಕ್ ಆಸ್ಪತ್ರೆಗಳು ಟ್ರಸ್ಟ್ ನಲ್ಲಿ ನೋಂದಾಯಿಸಿಕೊಂಡಿವೆ. ಜನವರಿ 1ರಿಂದಲೇ ಫಲಾನುಭವಿಗಳಿಗೆ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ‌. ಹೃದಯ ಸಂಬಂಧಿ ಕಾಯಿಲೆ, ಕಿವಿ, ಮೂಗು, ಗಂಟಲು ವ್ಯಾದಿಗಳು, ನರ, ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಇತ್ಯಾದಿ ರೋಗಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದಸ್ಯರು ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಹಾಜರುಪಡಿಸಿ 1650 ಚಿಕಿತ್ಸೆಗಳನ್ನು ನಗದುರಹಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿಂದಿನ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ದರ ಹೆಚ್ಚಿದ್ದಲ್ಲಿ ಆ ದರವನ್ನು ಅಥವಾ ಪ್ರಸ್ತುತ ಯೋಜನೆಗೆ ಪರಿಗಣಿಸಿರುವ ಆಯುಷ್ಮಾನ ಭಾರತ ಚಿಕಿತ್ಸೆ ದರಗಳು ಹೆಚ್ಚಿದ್ದಲ್ಲಿ ಅವುಗಳನ್ನು ಪರಿಗಣಿಸಲು ಆದೇಶವಾಗಿರುತ್ತದೆ. ಅಂದರೆ ಯಾವ ಯೋಜನೆಯಲ್ಲಿ ಹೆಚ್ಚಿನ ದರ ಇರುತ್ತದೆಯೋ ಆ ದರವನ್ನು ಪರಿಗಣಿಸಿ ಆಸ್ಪತ್ರೆಗಳ ಬಿಲ್ ಗಳನ್ನು ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.

ನೆಟ್ ವರ್ಕ್ ಆಸ್ಪತ್ರೆಗಳು ಬಿಲ್ಲುಗಳು ಸಲ್ಲಿಸಿದ ಒಂದು ತಿಂಗಳೊಳಗೆ ಅವುಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ಕಂತಿನ ಬಿಲ್ ಅನ್ನು ಫೆಬ್ರವರಿ 15ರೊಳಗೆ ಪಾವತಿ ಮಾಡಲು ಉದ್ದೇಶಿಸಲಾಗಿದೆ. ತದನಂತರ ಮುಂದಿನ ಬಿಲ್ ಗಳನ್ನು ಪ್ರತಿ ತಿಂಗಳು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

13 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

16 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

19 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

22 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

22 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

22 hours ago