ಜಿಲ್ಲೆಗಳು

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಹಲ್ಲೆ : ಪ್ರಕರಣ ದಾಖಲು

ಹನೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ 8 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ಕಣ್ಣೂರು ಗ್ರಾಮದ ಬಸವರಾಜಪ್ಪ, ಜಯಶೇಖರ್ , ಯೋಗೇಶ್ವರ್, ನಾಗೇಂದ್ರ, ವೃಷಭೇಂದ್ರ, ರಾಜಶೇಖರ್, ಅನಿಲ್, ಮಲ್ಲಿಕಾರ್ಜುನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ .

ಘಟನೆ ವಿವರ : ಕಳೆದ ವರ್ಷ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದೂರುದಾರ ವೃಷಭೇಂದ್ರ ಹಾಗೂ ಬಸವರಾಜಪ್ಪನವರ ಮಗ ಜಯಶೇಖರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಬಸವರಾಜಪ್ಪನವರ ಮಗ ಜಯಶೇಖರ್ ಪರಾಭವ ಗೊಂಡಿದ್ದರು. ಚುನಾವಣೆಯಲ್ಲಿ ಸೋತ ಹಿನ್ನೆಲೆ ಬಸವರಾಜಪ್ಪ ನನ್ನ ಮಗ ಗೆದ್ದಿದ್ದರೆ ಅಧ್ಯಕ್ಷ ಆಗುತ್ತಿದ್ದ ನಿನ್ನಿಂದಲೇ ಸೋತ ಎಂದು ನನ್ನ ಮೇಲೆ ವೈಮನಸ್ಸು ಇಟ್ಟುಕೊಂಡಿದ್ದನು. ಅ. 25 ರಂದು ನಾನು ನಮ್ಮ ಮನೆಯಲ್ಲಿದ್ದಾಗ ಗುರುಮಲ್ಲೇಶ್ವರ ಮಠದ ಬಳಿ ಬಸವರಾಜಪ್ಪ ಈತನ ಮಕ್ಕಳಾದ ಜಯಶೇಖರ್’ ಮಲ್ಲಿಕಾರ್ಜುನ್, ಈತನ ಮೊಮ್ಮಗ ಯೋಗೇಶ್ವರ್ ಆಲಿಯಾಸ್ ಚರಿತ ಮತ್ತು ಬಸವರಾಜಪ್ಪ ನ ಕಡೆಯವರಾದ ಮಹದೇವಸ್ವಾಮಿ ನಾಗೇಂದ್ರ, ವೃಷಭೇಂದ್ರಸ್ವಾಮಿ ರಾಜಶೇಖರ್ ಮೂರ್ತಿ ಅನಿಲ್ ರವರ ಗಳ ಗುಂಪು ಕಟ್ಟಿಕೊಂಡು ಬಂದು ದೊಡ್ಡ ದೊಡ್ಡ ಪಟಾಕಿಯನ್ನು ಮಠದ ಮುಂಭಾಗ ರಸ್ತೆಯಲ್ಲಿ ಹೊಡೆಯುತ್ತಿದ್ದರು. ಇದನ್ನು ಕೇಳಲು ಹೋದ ನನ್ನ ಮೇಲೆ ಬಸವರಾಜಪ್ಪ ಹಾಗೂ ಈತನ ಸಂಬಂಧಿ ಗಳು ದೊಣ್ಣೆಯಿಂದ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

2 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

26 mins ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

37 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

2 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

3 hours ago