ಹನೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ 8 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಕಣ್ಣೂರು ಗ್ರಾಮದ ಬಸವರಾಜಪ್ಪ, ಜಯಶೇಖರ್ , ಯೋಗೇಶ್ವರ್, ನಾಗೇಂದ್ರ, ವೃಷಭೇಂದ್ರ, ರಾಜಶೇಖರ್, ಅನಿಲ್, ಮಲ್ಲಿಕಾರ್ಜುನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ .
ಘಟನೆ ವಿವರ : ಕಳೆದ ವರ್ಷ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದೂರುದಾರ ವೃಷಭೇಂದ್ರ ಹಾಗೂ ಬಸವರಾಜಪ್ಪನವರ ಮಗ ಜಯಶೇಖರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಬಸವರಾಜಪ್ಪನವರ ಮಗ ಜಯಶೇಖರ್ ಪರಾಭವ ಗೊಂಡಿದ್ದರು. ಚುನಾವಣೆಯಲ್ಲಿ ಸೋತ ಹಿನ್ನೆಲೆ ಬಸವರಾಜಪ್ಪ ನನ್ನ ಮಗ ಗೆದ್ದಿದ್ದರೆ ಅಧ್ಯಕ್ಷ ಆಗುತ್ತಿದ್ದ ನಿನ್ನಿಂದಲೇ ಸೋತ ಎಂದು ನನ್ನ ಮೇಲೆ ವೈಮನಸ್ಸು ಇಟ್ಟುಕೊಂಡಿದ್ದನು. ಅ. 25 ರಂದು ನಾನು ನಮ್ಮ ಮನೆಯಲ್ಲಿದ್ದಾಗ ಗುರುಮಲ್ಲೇಶ್ವರ ಮಠದ ಬಳಿ ಬಸವರಾಜಪ್ಪ ಈತನ ಮಕ್ಕಳಾದ ಜಯಶೇಖರ್’ ಮಲ್ಲಿಕಾರ್ಜುನ್, ಈತನ ಮೊಮ್ಮಗ ಯೋಗೇಶ್ವರ್ ಆಲಿಯಾಸ್ ಚರಿತ ಮತ್ತು ಬಸವರಾಜಪ್ಪ ನ ಕಡೆಯವರಾದ ಮಹದೇವಸ್ವಾಮಿ ನಾಗೇಂದ್ರ, ವೃಷಭೇಂದ್ರಸ್ವಾಮಿ ರಾಜಶೇಖರ್ ಮೂರ್ತಿ ಅನಿಲ್ ರವರ ಗಳ ಗುಂಪು ಕಟ್ಟಿಕೊಂಡು ಬಂದು ದೊಡ್ಡ ದೊಡ್ಡ ಪಟಾಕಿಯನ್ನು ಮಠದ ಮುಂಭಾಗ ರಸ್ತೆಯಲ್ಲಿ ಹೊಡೆಯುತ್ತಿದ್ದರು. ಇದನ್ನು ಕೇಳಲು ಹೋದ ನನ್ನ ಮೇಲೆ ಬಸವರಾಜಪ್ಪ ಹಾಗೂ ಈತನ ಸಂಬಂಧಿ ಗಳು ದೊಣ್ಣೆಯಿಂದ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…