ಹನೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ 8 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಕಣ್ಣೂರು ಗ್ರಾಮದ ಬಸವರಾಜಪ್ಪ, ಜಯಶೇಖರ್ , ಯೋಗೇಶ್ವರ್, ನಾಗೇಂದ್ರ, ವೃಷಭೇಂದ್ರ, ರಾಜಶೇಖರ್, ಅನಿಲ್, ಮಲ್ಲಿಕಾರ್ಜುನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ .
ಘಟನೆ ವಿವರ : ಕಳೆದ ವರ್ಷ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದೂರುದಾರ ವೃಷಭೇಂದ್ರ ಹಾಗೂ ಬಸವರಾಜಪ್ಪನವರ ಮಗ ಜಯಶೇಖರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಬಸವರಾಜಪ್ಪನವರ ಮಗ ಜಯಶೇಖರ್ ಪರಾಭವ ಗೊಂಡಿದ್ದರು. ಚುನಾವಣೆಯಲ್ಲಿ ಸೋತ ಹಿನ್ನೆಲೆ ಬಸವರಾಜಪ್ಪ ನನ್ನ ಮಗ ಗೆದ್ದಿದ್ದರೆ ಅಧ್ಯಕ್ಷ ಆಗುತ್ತಿದ್ದ ನಿನ್ನಿಂದಲೇ ಸೋತ ಎಂದು ನನ್ನ ಮೇಲೆ ವೈಮನಸ್ಸು ಇಟ್ಟುಕೊಂಡಿದ್ದನು. ಅ. 25 ರಂದು ನಾನು ನಮ್ಮ ಮನೆಯಲ್ಲಿದ್ದಾಗ ಗುರುಮಲ್ಲೇಶ್ವರ ಮಠದ ಬಳಿ ಬಸವರಾಜಪ್ಪ ಈತನ ಮಕ್ಕಳಾದ ಜಯಶೇಖರ್’ ಮಲ್ಲಿಕಾರ್ಜುನ್, ಈತನ ಮೊಮ್ಮಗ ಯೋಗೇಶ್ವರ್ ಆಲಿಯಾಸ್ ಚರಿತ ಮತ್ತು ಬಸವರಾಜಪ್ಪ ನ ಕಡೆಯವರಾದ ಮಹದೇವಸ್ವಾಮಿ ನಾಗೇಂದ್ರ, ವೃಷಭೇಂದ್ರಸ್ವಾಮಿ ರಾಜಶೇಖರ್ ಮೂರ್ತಿ ಅನಿಲ್ ರವರ ಗಳ ಗುಂಪು ಕಟ್ಟಿಕೊಂಡು ಬಂದು ದೊಡ್ಡ ದೊಡ್ಡ ಪಟಾಕಿಯನ್ನು ಮಠದ ಮುಂಭಾಗ ರಸ್ತೆಯಲ್ಲಿ ಹೊಡೆಯುತ್ತಿದ್ದರು. ಇದನ್ನು ಕೇಳಲು ಹೋದ ನನ್ನ ಮೇಲೆ ಬಸವರಾಜಪ್ಪ ಹಾಗೂ ಈತನ ಸಂಬಂಧಿ ಗಳು ದೊಣ್ಣೆಯಿಂದ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…