ಹನೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ 8 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಕಣ್ಣೂರು ಗ್ರಾಮದ ಬಸವರಾಜಪ್ಪ, ಜಯಶೇಖರ್ , ಯೋಗೇಶ್ವರ್, ನಾಗೇಂದ್ರ, ವೃಷಭೇಂದ್ರ, ರಾಜಶೇಖರ್, ಅನಿಲ್, ಮಲ್ಲಿಕಾರ್ಜುನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ .
ಘಟನೆ ವಿವರ : ಕಳೆದ ವರ್ಷ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದೂರುದಾರ ವೃಷಭೇಂದ್ರ ಹಾಗೂ ಬಸವರಾಜಪ್ಪನವರ ಮಗ ಜಯಶೇಖರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಬಸವರಾಜಪ್ಪನವರ ಮಗ ಜಯಶೇಖರ್ ಪರಾಭವ ಗೊಂಡಿದ್ದರು. ಚುನಾವಣೆಯಲ್ಲಿ ಸೋತ ಹಿನ್ನೆಲೆ ಬಸವರಾಜಪ್ಪ ನನ್ನ ಮಗ ಗೆದ್ದಿದ್ದರೆ ಅಧ್ಯಕ್ಷ ಆಗುತ್ತಿದ್ದ ನಿನ್ನಿಂದಲೇ ಸೋತ ಎಂದು ನನ್ನ ಮೇಲೆ ವೈಮನಸ್ಸು ಇಟ್ಟುಕೊಂಡಿದ್ದನು. ಅ. 25 ರಂದು ನಾನು ನಮ್ಮ ಮನೆಯಲ್ಲಿದ್ದಾಗ ಗುರುಮಲ್ಲೇಶ್ವರ ಮಠದ ಬಳಿ ಬಸವರಾಜಪ್ಪ ಈತನ ಮಕ್ಕಳಾದ ಜಯಶೇಖರ್’ ಮಲ್ಲಿಕಾರ್ಜುನ್, ಈತನ ಮೊಮ್ಮಗ ಯೋಗೇಶ್ವರ್ ಆಲಿಯಾಸ್ ಚರಿತ ಮತ್ತು ಬಸವರಾಜಪ್ಪ ನ ಕಡೆಯವರಾದ ಮಹದೇವಸ್ವಾಮಿ ನಾಗೇಂದ್ರ, ವೃಷಭೇಂದ್ರಸ್ವಾಮಿ ರಾಜಶೇಖರ್ ಮೂರ್ತಿ ಅನಿಲ್ ರವರ ಗಳ ಗುಂಪು ಕಟ್ಟಿಕೊಂಡು ಬಂದು ದೊಡ್ಡ ದೊಡ್ಡ ಪಟಾಕಿಯನ್ನು ಮಠದ ಮುಂಭಾಗ ರಸ್ತೆಯಲ್ಲಿ ಹೊಡೆಯುತ್ತಿದ್ದರು. ಇದನ್ನು ಕೇಳಲು ಹೋದ ನನ್ನ ಮೇಲೆ ಬಸವರಾಜಪ್ಪ ಹಾಗೂ ಈತನ ಸಂಬಂಧಿ ಗಳು ದೊಣ್ಣೆಯಿಂದ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…
ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…
ಮೈಸೂರು: ಮಿರರ್ ರಿಫ್ಲೆಕ್ಷನ್ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್…