ಜಿಲ್ಲೆಗಳು

ಉಪ್ಪಾರರನ್ನು ಪರಿಶಿಷ್ಟ ಪಟ್ಟಿಗೆ ಸೇರಿಸಲು ಆಗ್ರಹ

ಚಾಮರಾಜನಗರ: ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ತೀವ್ರ ಹಿಂದುಳಿದಿರುವ ಉಪ್ಪಾರ ಸಮುದಾಯ ವನ್ನು ಪರಿಶಿಷ್ಟರ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂದು  ರಾಜ್ಯ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಾಗಳಿ ರೇವಣ್ಣ ಸರ್ಕಾರವನ್ನು ಒತ್ತಾಯಿಸಿದರು.

ನಗರದ ವಾಲ್ಮೀಕಿ ಭವನದಲ್ಲಿ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಡೆದ  ಉಪ್ಪಾರ ಸಮುದಾಯವನ್ನು ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಹೋರಾಟ ರೂಪಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು ಆಡಳಿತ ನಡೆದ ಎಲ್ಲ ರಾಜಕೀಯ ಪಕ್ಷಗಳ ಉಪ್ಪಾರ ಸಮುದಾಯವನ್ನು ಮತಬ್ಯಾಂಕ್ ಮಾಡಿಕೊಂಡಿವೇ ಹೊರತು ಸಮಾಜ ಅಭಿವೃದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿವೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಉಪ್ಪಾರ ಸಮಾಜ 50 ಲಕ್ಷಕ್ಕೂ ಹೆಚ್ವಿನ ಜನಸಂಖ್ಯೆ ಹೊಂದಿದ್ದು, 36 ವಿಧಾನಸಭಾ ಕ್ಷೇತ್ರದಲ್ಲಿ ನಿರ್ಣಾಯಕವಾಗಿದ್ದೇವೆ  ಉಪ್ಪಾರ ಸನುದಾಯವನ್ನು ಮೀಸಲಾತಿ ಪಟ್ಟಿಗೆ ಸೇರಿಸಬೇಕು ಇಲ್ಲದ್ದಿದ್ದರೆ ಮುಂದಿನ ಬರುವ ಚುನಾವಣೆಗಳಲ್ಲಿ  ತಕ್ಕ ಪಾಠ ಕಲಿಸುವುದಾಗಿ ರಾಜಕೀಯ ಪಕ್ಷಗಳಿಗೆ ಎಚ್ಚರಿಸಿದರು.

ಮುಖಂಡ ಜಿ.ಎಂ.ಗಾಢ್ಕರ್ ಮಾತನಾಡಿ, ಯಾವ ಅಧ್ಯಯನವನ್ನು ಮಾಡದೇ ನೇರವಾಗಿ ಮೇಲ್ವರ್ಗದವರಿಗೆ ಶೇ. 10 ರಷ್ಟು ಮೀಸಲಾತಿ ನೀಡಿದ್ದೀರಿ. ಆದರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಕುಲಶಾಸ್ತ್ರ ಆಧ್ಯಯನ ಮಾಡುವುದು ಒಂದು ಬ್ಲಾಕ್ ಮೇಲ್ ಮಾಡುವ ತಂತ್ರವಾಗಿದೆ. ಚಿನ್ನಪ್ಪರೆಡ್ಡಿ ಆಯೋಗ, ಎಲ್.ಜಿ. ಹಾವನೂರು ಆಯೋಗ ಹಾಗೂ ವೆಂಕಟಸ್ವಾಮಿ ಆಯೋಗದ ಪ್ರಕಾರವೇ ಉಪ್ಪಾರ ಸಮುದಾಯಕ್ಕೆ  ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಜಿ.ಪಂ.ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ ಮಾತನಾಡಿದರು.

ಸಭೆಯಲ್ಲಿ ಸಮುದಾಯದ ಮಂಜುನಾಥಸ್ವಾಮೀಜಿ ಅವರ ನೇತೃತ್ವದಲ್ಲಿ ಉಪ್ಪಾರ ಸಮುದಾಯದ  88 ಗಡಿಮನೆ ಯಜಮಾನರ ಸಮ್ಮುಖದಲ್ಲಿ  ಉಪ್ಪಾರ ಸಮುದಾಯವನ್ನು ಮೀಸಲಾತಿ ಪಟ್ಟಿಗೆ ಸೇರಿಸುವಂತೆ  ಸರ್ಕಾರವನ್ನು ಒತ್ತಾಯಿಸಲು ಬೃಹತ್ ಮಟ್ಟದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲು ಮುಂದಿನ ದಿನಗಳಲ್ಲಿ ದಿನಾಂಕ ನಿಗದಿಪಡಿಸಲು ತೀರ್ಮಾನಿಸಲಾಯಿತು.

andolanait

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

9 mins ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

2 hours ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

2 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

3 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

3 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

3 hours ago