ಮೈಸೂರು: ಕ್ಷುಲ್ಲಕ ಕಾರಣಕ್ಕೆ ತಂದೆ ಮಗನನ್ನೆ ಕೊಂದ ಘಟನೆ ಮೈಸೂರಿನ ಬನ್ನಿಮಂಟಪದಲ್ಲಿ ನಡೆದಿದೆ.
ತಂದೆ ಮಗನ ಮಧ್ಯೆ ಮೊಬೈಲ್ ವಿಚಾರವಾಗಿ ಪ್ರಾರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಾವಗಿದೆ. ಉಮೇಜ್(23) ತನ್ನ ತಾಯಿಯ ಮೊಬೈಲ್ ಬಳಸುತ್ತಿದ್ದ. ಇದನ್ನು ಸಹಿಸದ ತಂದೆ ಅಸ್ಲಂ ಪಾಷಾ ತಾಯಿಯ ಮೊಬೈಲ್ ಮುಟ್ಟದಂತೆ ಹೇಳಿದ್ದಾನೆ.
ಅನುಮತಿ ಇಲ್ಲದೆ ತಾಯಿಯ ಮೊಬೈಲ್ ಬಳಸದಂತೆ ತಂದೆ ಅಸ್ಲಂ ಪಾಷಾ ತಾಕೀತು ಮಾಡಿದ್ದಾನೆ. ಮಾತಿಮಾತು ಬೆಳೆದು ಇಬ್ಬರ ಮಧ್ಯೆ ಗಲಾಟೆಯಾಗಿದೆ. ಈ ಮಧ್ಯೆ ತಂದೆ ಅಸ್ಲಂ ಪಾಷಾ ಮಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಮಗನನ್ನು ಕೊಲೆ ಮಾಡಿದ ಬಳಿಕ ಆರೋಪಿ ತಂದೆ ಅಸ್ಲಂ ಪಾಷಾ ಎನ್.ಆರ್. ಠಾಣೆಗೆ ಬಂದು ಘಟನೆ ಬಗ್ಗೆ ಪೊಲೀಸರಿಗೆ ತಿಳಿಸಿ ಸರೆಂಡರ್ ಆಗಿದ್ದಾನೆ, ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…