ಜಿಲ್ಲೆಗಳು

ವಿ.ಸೋಮಣ್ಣ ವಿರುದ್ಧ ಅಪಪ್ರಚಾರ ಬೇಡ

ಸುದ್ದಿಗೋಷ್ಠಿಯಲ್ಲಿ  ಮಹದೇವಸ್ವಾಮಿ ಮನವಿ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮುಂದುವರಿಸಬಾರದು ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ಅವರು ಮನವಿ ಮಾಡಿದರು.
ಅಚಾನಕ್ ಘಟನೆಯನ್ನು ಮುಂದಿಟ್ಟುಕೊAಡು ಕೆಲವರು ಸ್ವಾರ್ಥ ರಾಜಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಸಚಿವರು ಜಾತಿಭೇದ ಮಾಡದೆ ಎಲ್ಲರೊಡನೆ ಬೆರೆತು ಜಿಲ್ಲೆಯ ಅಭಿವೃದ್ದಿಗೆ ದುಡಿಯುತ್ತಿದ್ದಾರೆ. ಇವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಂದು ಕೋರಿದರು.
ಘಟನೆ ಸಂಬoಧ ಸೋಮಣ್ಣ ಕ್ಷಮೆಯಾಚಿಸಿದ್ದಾರೆ. ಕೆಂಪಮ್ಮ ಕೂಡ ಸಚಿವರು ನನಗೆ ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆಕೆಗೆ ಸಚಿವರು ಸ್ಥಳದಲ್ಲೇ ನಿವೇಶನ ಹಕ್ಕು ಪತ್ರ ಕೊಡಿಸಿದ್ದಾರೆ. ಆದರೂ ದಲಿತ, ರೈತ ಸಂಘಟನೆಗಳು ಘಟನೆಯನ್ನು ದೊಡ್ಡದಾಗಿ ಬಿಂಬಿಸುವುದು ಸರಿಯಲ್ಲ ಎಂದರು.
ಸಚಿವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಇದೇ ರೈತ ಸಂಘದ ಮುಖಂಡರು ೩ ತಿಂಗಳ ಹಿಂದೆ ಸೋಮಣ್ಣ ಅವರನ್ನು ಸನ್ಮಾನಿಸಿದ್ದರು. ಈಗ ತಿರುಗಿ ಬಿದ್ದಿರುವುದು ಸರಿಯಲ್ಲ. ಪೌರ ಕಾರ್ಮಿಕರಿಗೆ ಮನೆ ಹಕ್ಕುಪತ್ರ ವಿತರಣೆ ಸಮಾರಂಭದಲ್ಲಿ ಭಾಗವಹಿಸಿದ್ದು ತಪ್ಪೇ ? ಸಂಸದರೊಡನೆ ಸಮಾಲೋಚನೆ ಮಾಡಿ ೧ ಗಂಟೆ ವಿಳಂಬವಾಗಿ ರೈತರ ಸಭೆಗೆ ಆಗಮಿಸಿದ್ದು ತಪ್ಪೇ ಎಂದು ಪ್ರಶ್ನಿಸಿದರು.
ಸಚಿವರು ಜಿಲ್ಲೆಯಲ್ಲಿ ಹಲವು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಸದ್ಯವೇ ಮುಖ್ಯಮಂತ್ರಿ ಅವರನ್ನು ಜಿಲ್ಲೆಗೆ ಆಹ್ವಾನಿಸಿ ಜಿಲ್ಲೆಯಲ್ಲಿ ಬಾಕಿಯಿರುವ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಕೊಡಿಸಲು ಮುಂದಾಗಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಸೋಮಣ್ಣ ಅವರೊಡನೆ ಸಂಘಟನೆಗಳು ಕೈಜೋಡಿಸಬೇಕು ಎಂದು ಕೋರಿದರು.

andolanait

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

27 mins ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

46 mins ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

54 mins ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

57 mins ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

1 hour ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

1 hour ago