ಸುದ್ದಿಗೋಷ್ಠಿಯಲ್ಲಿ ಮಹದೇವಸ್ವಾಮಿ ಮನವಿ
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮುಂದುವರಿಸಬಾರದು ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಎನ್ರಿಚ್ ಮಹದೇವಸ್ವಾಮಿ ಅವರು ಮನವಿ ಮಾಡಿದರು.
ಅಚಾನಕ್ ಘಟನೆಯನ್ನು ಮುಂದಿಟ್ಟುಕೊAಡು ಕೆಲವರು ಸ್ವಾರ್ಥ ರಾಜಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಸಚಿವರು ಜಾತಿಭೇದ ಮಾಡದೆ ಎಲ್ಲರೊಡನೆ ಬೆರೆತು ಜಿಲ್ಲೆಯ ಅಭಿವೃದ್ದಿಗೆ ದುಡಿಯುತ್ತಿದ್ದಾರೆ. ಇವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಂದು ಕೋರಿದರು.
ಘಟನೆ ಸಂಬoಧ ಸೋಮಣ್ಣ ಕ್ಷಮೆಯಾಚಿಸಿದ್ದಾರೆ. ಕೆಂಪಮ್ಮ ಕೂಡ ಸಚಿವರು ನನಗೆ ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆಕೆಗೆ ಸಚಿವರು ಸ್ಥಳದಲ್ಲೇ ನಿವೇಶನ ಹಕ್ಕು ಪತ್ರ ಕೊಡಿಸಿದ್ದಾರೆ. ಆದರೂ ದಲಿತ, ರೈತ ಸಂಘಟನೆಗಳು ಘಟನೆಯನ್ನು ದೊಡ್ಡದಾಗಿ ಬಿಂಬಿಸುವುದು ಸರಿಯಲ್ಲ ಎಂದರು.
ಸಚಿವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಇದೇ ರೈತ ಸಂಘದ ಮುಖಂಡರು ೩ ತಿಂಗಳ ಹಿಂದೆ ಸೋಮಣ್ಣ ಅವರನ್ನು ಸನ್ಮಾನಿಸಿದ್ದರು. ಈಗ ತಿರುಗಿ ಬಿದ್ದಿರುವುದು ಸರಿಯಲ್ಲ. ಪೌರ ಕಾರ್ಮಿಕರಿಗೆ ಮನೆ ಹಕ್ಕುಪತ್ರ ವಿತರಣೆ ಸಮಾರಂಭದಲ್ಲಿ ಭಾಗವಹಿಸಿದ್ದು ತಪ್ಪೇ ? ಸಂಸದರೊಡನೆ ಸಮಾಲೋಚನೆ ಮಾಡಿ ೧ ಗಂಟೆ ವಿಳಂಬವಾಗಿ ರೈತರ ಸಭೆಗೆ ಆಗಮಿಸಿದ್ದು ತಪ್ಪೇ ಎಂದು ಪ್ರಶ್ನಿಸಿದರು.
ಸಚಿವರು ಜಿಲ್ಲೆಯಲ್ಲಿ ಹಲವು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಸದ್ಯವೇ ಮುಖ್ಯಮಂತ್ರಿ ಅವರನ್ನು ಜಿಲ್ಲೆಗೆ ಆಹ್ವಾನಿಸಿ ಜಿಲ್ಲೆಯಲ್ಲಿ ಬಾಕಿಯಿರುವ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಕೊಡಿಸಲು ಮುಂದಾಗಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಸೋಮಣ್ಣ ಅವರೊಡನೆ ಸಂಘಟನೆಗಳು ಕೈಜೋಡಿಸಬೇಕು ಎಂದು ಕೋರಿದರು.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…