ಜಿಲ್ಲೆಗಳು

ವಿ.ಸೋಮಣ್ಣ ವಿರುದ್ಧ ಅಪಪ್ರಚಾರ ಬೇಡ

ಸುದ್ದಿಗೋಷ್ಠಿಯಲ್ಲಿ  ಮಹದೇವಸ್ವಾಮಿ ಮನವಿ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮುಂದುವರಿಸಬಾರದು ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ಅವರು ಮನವಿ ಮಾಡಿದರು.
ಅಚಾನಕ್ ಘಟನೆಯನ್ನು ಮುಂದಿಟ್ಟುಕೊAಡು ಕೆಲವರು ಸ್ವಾರ್ಥ ರಾಜಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಸಚಿವರು ಜಾತಿಭೇದ ಮಾಡದೆ ಎಲ್ಲರೊಡನೆ ಬೆರೆತು ಜಿಲ್ಲೆಯ ಅಭಿವೃದ್ದಿಗೆ ದುಡಿಯುತ್ತಿದ್ದಾರೆ. ಇವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಂದು ಕೋರಿದರು.
ಘಟನೆ ಸಂಬoಧ ಸೋಮಣ್ಣ ಕ್ಷಮೆಯಾಚಿಸಿದ್ದಾರೆ. ಕೆಂಪಮ್ಮ ಕೂಡ ಸಚಿವರು ನನಗೆ ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆಕೆಗೆ ಸಚಿವರು ಸ್ಥಳದಲ್ಲೇ ನಿವೇಶನ ಹಕ್ಕು ಪತ್ರ ಕೊಡಿಸಿದ್ದಾರೆ. ಆದರೂ ದಲಿತ, ರೈತ ಸಂಘಟನೆಗಳು ಘಟನೆಯನ್ನು ದೊಡ್ಡದಾಗಿ ಬಿಂಬಿಸುವುದು ಸರಿಯಲ್ಲ ಎಂದರು.
ಸಚಿವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಇದೇ ರೈತ ಸಂಘದ ಮುಖಂಡರು ೩ ತಿಂಗಳ ಹಿಂದೆ ಸೋಮಣ್ಣ ಅವರನ್ನು ಸನ್ಮಾನಿಸಿದ್ದರು. ಈಗ ತಿರುಗಿ ಬಿದ್ದಿರುವುದು ಸರಿಯಲ್ಲ. ಪೌರ ಕಾರ್ಮಿಕರಿಗೆ ಮನೆ ಹಕ್ಕುಪತ್ರ ವಿತರಣೆ ಸಮಾರಂಭದಲ್ಲಿ ಭಾಗವಹಿಸಿದ್ದು ತಪ್ಪೇ ? ಸಂಸದರೊಡನೆ ಸಮಾಲೋಚನೆ ಮಾಡಿ ೧ ಗಂಟೆ ವಿಳಂಬವಾಗಿ ರೈತರ ಸಭೆಗೆ ಆಗಮಿಸಿದ್ದು ತಪ್ಪೇ ಎಂದು ಪ್ರಶ್ನಿಸಿದರು.
ಸಚಿವರು ಜಿಲ್ಲೆಯಲ್ಲಿ ಹಲವು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಸದ್ಯವೇ ಮುಖ್ಯಮಂತ್ರಿ ಅವರನ್ನು ಜಿಲ್ಲೆಗೆ ಆಹ್ವಾನಿಸಿ ಜಿಲ್ಲೆಯಲ್ಲಿ ಬಾಕಿಯಿರುವ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಕೊಡಿಸಲು ಮುಂದಾಗಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಸೋಮಣ್ಣ ಅವರೊಡನೆ ಸಂಘಟನೆಗಳು ಕೈಜೋಡಿಸಬೇಕು ಎಂದು ಕೋರಿದರು.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

4 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

17 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

17 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

17 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

17 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

17 hours ago