Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮಹಿಳೆಗೆ ಸಚಿವ ವಿ. ಸೋಮಣ್ಣ ಕಪಾಳಮೋಕ್ಷ ಪ್ರಕರಣ : ಸ್ಪಷ್ಟನೆ ನೀಡಿದ ಕೆಂಪಮ್ಮ

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.

ಹೌದು, ಈ ಬಗ್ಗೆ ಮಾತನಾಡಿರುವ ಮಹಿಳೆ ಕೆಂಪಮ್ಮ ಅವರು ನನಗೆ ಸಚಿವರು ಹೊಡೆದಿಲ್ಲ, ಭಾವುಕಳಾದಾಗ ನನ್ನನ್ನು ಸಮಾಧಾನಪಡಿಸಿದರು ಎಂದು ಹೇಳಿದ್ದಾರೆ.

ನಾನು ಪದೇ ಪದೆ ಸಚಿವರ ಕಾಲಿಗೆ ನಮಸ್ಕರಿಸುತ್ತಿದ್ದಾಗ ಬೇಡ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಭಾವುಕಳಾದೆ. ತಕ್ಷಣ ಸಚಿವರು ನನ್ನನ್ನು ಸಮಾಧಾನಪಡಿಸಿ, ನಿನಗೆ ವಸತಿ ಕಲ್ಪಿಸಿ ಕೊಡುವುದಾಗಿ ಹೇಳಿದರು. ಅವರು ನನಗೆ ಒಳ್ಳೆಯದು ಮಾಡಿದ್ದಾರೆಯೇ ಹೊರತು ಕೆಟ್ಟದು ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ