ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ವತಿಯಿಂದ ತಾಲೂಕಿನ ಸಂತೇಮರಹಳ್ಳಿಯಲ್ಲಿ ರಸ್ತೆತಡೆ ನಡೆಸಲಾಯಿತು.
ಸಂತೇಮರಹಳ್ಳಿ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು, ನಗರಸಭಾ ಸದಸ್ಯ ಆರ್.ಪಿ. ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ರಾಷ್ಡ್ರೀಯ ಹೆದ್ದಾರಿ 209ರ ಮೂಲಕ ಸಂತೇಮರಹಳ್ಳಿ ವೃತ್ತಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಸಚಿವ ವಿ.ಸೋಮಣ್ಣ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ಮಾತನಾಡಿ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಕಷ್ಠ ಹೇಳಿಕೊಳ್ಳಲು ಬಂದಿದ್ದ ದಲಿತ ಮಹಿಳೆಗೆ ಸಚಿವ ವಿ.ಸೋಮಣ್ಣ ಕಾಪಾಳಮೋಕ್ಷ ಮಾಡಿರುವುದು ಒಂದು ದೊಡ್ಡ ದುರಂತವಾಗಿದೆ ಇದು ತೀವ್ರ ಖಂಡನೀಯ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಚಿವ ಸಂಪುಟದಿAದ ವಜಾಮಾಡಬೇಕು. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಮಾತನಾಡಿ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಕಷ್ಠ ಹೇಳಿಕೊಳ್ಳಲು ಬಂದಿದ್ದ ಕೆಂಪಮ್ಮ ಎಂಬ ಮಹಿಳೆಗೆ ಸಚಿವ ವಿ.ಸೋಮಣ್ಣ ಕಾಪಾಳಮೋಕ್ಷ ಮಾಡಿ ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ರಾಜ್ಯ ಉಪ್ಪಾರ ಎಸ್ಟಿ ಹೋರಾಟ ಸಮಿತಿ ಅಧ್ಯಕ್ಷ ಬಾಗಳಿರೇವಣ್ಣ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ)ದ ಜಿಲ್ಲಾ ಸಂಘಟನಾ ಸಂಚಾಲಕರಾದ ನಾಗಣ್ಣ, ಕೆ.ವೀರ, ಮಹದೇವಸ್ವಾಮಿ, ರವಿಕುಮಾರ್, ಶಿವಣ್ಣ, ಮುರುಗೇಶ್, ರಾಚಪ್ಪ, ಆಮ್ ಆದ್ಮಿ ಪಕ್ಷದ ಮುಖಂಡರಾದ ನಾಗೇಂದ್ರ, ಹರೀಶ್, ಕೆಂಪಣ್ಣ, ಲಿಂಗರಾಜು, ಜಾನ್, ಕರುನಾಡ ವಿಜಯಸೇನೆ ಮಂಜುನಾಯಕ, ಜಗದೀಶ್, ಸಿದ್ದರಾಜು, ನಂಜುಂಡಸ್ವಾಮಿ, ಮೋಹನ್ ಕುಮಾರ್ ಇತರರು ಭಾಗವಹಿಸಿದ್ದರು.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…