ಜಿಲ್ಲೆಗಳು

ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ DSS ರಸ್ತೆತಡೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ ತಾಲೂಕಿನ ಸಂತೇಮರಹಳ್ಳಿಯಲ್ಲಿ ರಸ್ತೆತಡೆ ನಡೆಸಲಾಯಿತು.

ಸಂತೇಮರಹಳ್ಳಿ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು, ನಗರಸಭಾ ಸದಸ್ಯ ಆರ್.ಪಿ. ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ರಾಷ್ಡ್ರೀಯ ಹೆದ್ದಾರಿ 209ರ ಮೂಲಕ ಸಂತೇಮರಹಳ್ಳಿ ವೃತ್ತಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಸಚಿವ ವಿ.ಸೋಮಣ್ಣ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ಮಾತನಾಡಿ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಕಷ್ಠ ಹೇಳಿಕೊಳ್ಳಲು ಬಂದಿದ್ದ ದಲಿತ ಮಹಿಳೆಗೆ ಸಚಿವ ವಿ.ಸೋಮಣ್ಣ ಕಾಪಾಳಮೋಕ್ಷ ಮಾಡಿರುವುದು ಒಂದು ದೊಡ್ಡ ದುರಂತವಾಗಿದೆ ಇದು ತೀವ್ರ ಖಂಡನೀಯ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಚಿವ ಸಂಪುಟದಿAದ ವಜಾಮಾಡಬೇಕು. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಮಾತನಾಡಿ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಕಷ್ಠ ಹೇಳಿಕೊಳ್ಳಲು ಬಂದಿದ್ದ ಕೆಂಪಮ್ಮ ಎಂಬ ಮಹಿಳೆಗೆ ಸಚಿವ ವಿ.ಸೋಮಣ್ಣ ಕಾಪಾಳಮೋಕ್ಷ ಮಾಡಿ ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಉಪ್ಪಾರ ಎಸ್‌ಟಿ ಹೋರಾಟ ಸಮಿತಿ ಅಧ್ಯಕ್ಷ ಬಾಗಳಿರೇವಣ್ಣ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ)ದ ಜಿಲ್ಲಾ ಸಂಘಟನಾ ಸಂಚಾಲಕರಾದ ನಾಗಣ್ಣ, ಕೆ.ವೀರ, ಮಹದೇವಸ್ವಾಮಿ, ರವಿಕುಮಾರ್, ಶಿವಣ್ಣ, ಮುರುಗೇಶ್, ರಾಚಪ್ಪ, ಆಮ್ ಆದ್ಮಿ ಪಕ್ಷದ ಮುಖಂಡರಾದ ನಾಗೇಂದ್ರ, ಹರೀಶ್, ಕೆಂಪಣ್ಣ, ಲಿಂಗರಾಜು, ಜಾನ್, ಕರುನಾಡ ವಿಜಯಸೇನೆ ಮಂಜುನಾಯಕ, ಜಗದೀಶ್, ಸಿದ್ದರಾಜು, ನಂಜುಂಡಸ್ವಾಮಿ, ಮೋಹನ್ ಕುಮಾರ್ ಇತರರು ಭಾಗವಹಿಸಿದ್ದರು.

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

3 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

5 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

11 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

11 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

11 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

11 hours ago