Mysore
28
light rain

Social Media

ಬುಧವಾರ, 05 ಆಗಸ್ಟ್ 2026
Light
Dark

ಮಲೆ ಮಹದೇಶ್ವರ ಬೆಟ್ಟಕ್ಕೆ ಸಚಿವ ವಿ ಸೋಮಣ್ಣ ಭೇಟಿ

ಹನೂರು : ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಶನಿವಾರ ಸಂಜೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸಚಿವ ವಿ ಸೋಮಣ್ಣ ರವರ ಪತ್ನಿ ಶೈಲಜಾ ಪುತ್ರಿ ಪ್ರಿಯಾ ಮೊಮ್ಮಕಳಾದ ದಕ್ಷ ಹಾಗೂ ಗೌರಿ ಕುಟುಂಬ ಸಮೇತ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ದೇವಾಲಯದ ಆಗಮಿಕ ಕರವೀರ ಸ್ವಾಮಿ, ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಶಾಂತ್, ಮುಖಂಡರುಗಳಾದ ಪೊನ್ನಾಚಿ ಮಹದೇವಸ್ವಾಮಿ, ಚೇತನ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಪ್ರತಿಮೆ ವೀಕ್ಷಣೆ : ವಿಶೇಷ ಪೂಜೆ ಸಲ್ಲಿಸಿದ ನಂತರ ದೀಪದ ಗಿರಿ ಒಡ್ಡುವಿನಲ್ಲಿ ನಿರ್ಮಾಣ ಮಾಡುತ್ತಿರುವ 108 ಅಡಿ ಪ್ರತಿಮೆ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮಾತನಾಡಿದ ಅವರು ಆದಷ್ಟು ಬೇಗ ಕಾಮಗಾರಿಯನ್ನು ಫೆಬ್ರವರಿ ತಿಂಗಳ ಒಳಗೆ ಪೂರ್ಣಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಮತ್ತೊಮ್ಮೆ ಕ್ಷೇತ್ರಕ್ಕೆ ಕರೆತಂದು ಉದ್ಘಾಟನೆ ಮಾಡಿಸಿ ಭಕ್ತರ ದರ್ಶನಕ್ಕೆ ಅನುಕೂಲ ಮಾಡಿಕೊಡೋಣ ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!