Mysore
28
overcast clouds

Social Media

ಬುಧವಾರ, 17 ಜೂನ್ 2026
Light
Dark

ಬೊಮ್ಮಲಾಪುರದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ; ಗಮನ ಸೆಳೆದ ರಾಮಾಯಣ ವೇಷಧಾರಿಗಳು

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವಾಲ್ಮೀಕಿ ಜಯಂತಿಯನ್ನು ನಾಯಕ ಸಮುದಾಯದ ವತಿಯಿಂದ ಭಾನುವಾರ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ವಾಲ್ಮೀಕಿ ಮಹರ್ಷಿ ಭಾವಚಿತ್ರ, ವಾಲ್ಮೀಕಿ ಸಮುದಾಯದ ಶ್ರೀಗಳ ಭಾವಚಿತ್ರವನ್ನು ಹೂಗಳಿಂದ ಅಲಂಕರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಜೊತೆಗೆ, ಯುವಕರುಗಳು ರಾಮಾಯಣದ ಪಾತ್ರಧಾರಿಗಳಾಗಿ, ವೀರ ಮದಕರಿ ನಾಯಕ, ಒನಕೆ ಒಬವ್ವ, ಏಕಲವ್ಯನ‌ ವೇಷದಲ್ಲಿ ಹೆಜ್ಜೆ ಹಾಕಿದ್ದು ಗಮನ ಸೆಳೆಯಿತು.
ಪ್ರತಿವರ್ಷವೂ ಬೊಮ್ಮಲಾಪುರ ಗ್ರಾಮದಲ್ಲಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಿದ್ದು ಸಂಬಂಧಿಕರನ್ನು ಕರೆದು ಸಿಹಿ ಊಟ ಹಾಕಿಸಿ ಭಕ್ತಿ-ಶ್ರದ್ಧೆಗಳಿಂದ ಮಹರ್ಷಿ ವಾಲ್ಮೀಕಿ ಅವರನ್ನು ಪೂಜಿಸಲಿದ್ದಾರೆ.‌ ಗ್ರಾಮದ ಯಜಮಾನರುಗಳು, ಯುವ ಮುಖಂಡರುಗಳು ಕಾರ್ಯಕ್ರಮದ ಮುಂದಾಳತ್ವ ವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!