ಜಿಲ್ಲೆಗಳು

ನಾಳೆ ಮೈಸೂರಿಗೆ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು

ಮೈಸೂರಿಗೆ ನಾಳೆ ಬರಲಿರುವ ರೈಲು
ನ.೧೨ ರಂದು ಬೆಳಿಗ್ಗೆ ೫-೫೦ಕ್ಕೆ ವಂದೇ ಭಾರತ್ ರೈಲು ಚೆನ್ನೈ ನಿಲ್ದಾಣದಿಂದ ನಿರ್ಗಮಿಸಲಿದೆ.೧೦-೨೦ಕ್ಕೆ ಬೆಂಗಳೂರಿಗೆ ಆಗಮಿಸಿ ೧೦-೨೫ಕ್ಕೆ ಬೆಂಗಳೂರು ನಿಲ್ದಾಣ ಬಿಟ್ಟು ಮಧ್ಯಾಹ್ನ ೧೨-೨೦ ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಇದೇ ಸಮಯ ಮುಂದುವರಿಯಲಿದೆ.

ಮೈಸೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಯೋಜನೆಯ ಭಾಗವಾದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನ.೧೧ ರಂದು ಬೆಂಗಳೂರು- ಚೆನ್ನೈ ನಡುವೆ ಸಂಚಾರ ಆರಂಭಿಸಲಿದೆ.

ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಈ ಎಕ್ಸ್ ಪ್ರೆಸ್ ರೈಲನ್ನು ಪರಿಚಯಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ಈ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಇದು ಭಾರತದಲ್ಲಿ ಅತಿವೇಗದಲ್ಲಿ ಸಂಚರಿಸುವ ಪ್ರಪ್ರಥಮ ರೈಲಾಗಿದೆ.
ಈ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಭಾರತದಲ್ಲಿ ಪರಿಚಯಿಸುತ್ತಿರುವ ಐದನೆಯದಾಗಿದೆ. ಇದಕ್ಕೂ ಮೊದಲು ರಾಷ್ಟ್ರದ ರಾಜಧಾನಿ ಹೊಸದಿಲ್ಲಿ-ದೇಶದ ವಾಣಿಜ್ಯನಗರಿ ಮುಂಬೈ, ಗುಜರಾತ್‌ನ ಅಹಮದಾಬಾದ್ – ಕಾನ್‌ಪುರ- ವಾರಣಾಸಿ ಮತ್ತಿತರ ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ನಾಲ್ಕು ವಂದೇ ಭಾರತ್ ಅತಿವೇಗದ ಎಕ್ಸ್ ಪ್ರೆಸ್ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಈ ರೈಲು ಬೆಂಗಳೂರು ಮತ್ತು ಮೈಸೂರು ಹಾಗೂ ತಮಿಳುನಾಡು ರಾಜಧಾನಿ ಚೆನ್ನೈ ಮಹಾನಗರವನ್ನು ಸಂಪರ್ಕಿಸಲಿದೆ.
ಸುಸಜ್ಜಿತ ವ್ಯವಸ್ಥೆ: ಈ ಎಕ್ಸ್ ಪ್ರೆಸ್ ರೈಲು ಒಟ್ಟು ೧೬ ಬೋಗಿಗಳನ್ನು ಹೊಂದಿದ್ದು ಆಟೋಮ್ಯಾಟಿಕ್ ತಂತ್ರಜ್ಞಾನದ ಬಾಗಿಲುಗಳು ಮತ್ತು ೧೮೦ ಡಿಗ್ರಿಯಲ್ಲಿ ತಿರುಗಬಹುದಾಗ ಆಸನ ವ್ಯವಸ್ಥೆಯನ್ನು ಒಳಗೊಂಡಿರುತ್ತದೆ.ಒಂದು ವಂದೇ ಭಾರತ್ ರೈಲಿನ ಹದಿನಾರು ಬೋಗಿಗಳನ್ನು ತಯಾರಿಸಲು ೯೭ ಕೋಟಿ ರೂ.ವೆಚ್ಚ ತಗಲುತ್ತದೆ.
ಗಂಟೆಗೆ ಅತಿ ಹೆಚ್ಚು ಅಂದರೆ ೧೬೦ ರಿಂದ ೧೮೦ ಕಿ.ಮೀ. ವೇಗದಲ್ಲಿ ಸಂಚರಿಸುವ ಸಾಮರ್ಥ್ಯವಿರುವ ಈ ರೈಲು, ಶತಾಬ್ದಿ ರೈಲಿಗಿಂತ ವೇಗವಾಗಿ ಸಂಚರಿಸಲಿದೆ. ಈಗ ಮೈಸೂರು -ಚೆನ್ನೈ ನಡುವೆ ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿರುವ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಚೆನ್ನೈನಿಂದ ಮೈಸೂರು ತಲುಪಲು ೭.೧೫ ಗಂಟೆ ತೆಗೆದು ಕೊಳ್ಳುತ್ತದೆ.ಈಗ ಪರಿಚಯಿಸುತ್ತಿರುವ ವಂದೇ ಭಾರತ್ ೬.೪೦ ಗಂಟೆ ತೆಗೆದುಕೊಳ್ಳುತ್ತದೆ.ಈ ಎರಡೂ ರೈಲುಗಳ ಸಂಚಾರದ ವೇಗದಲ್ಲಿ ೩೫ ನಿಮಿಷ ಮಾತ್ರ ಅಂತರವಿದೆ.


ಅತಿ ಹಗುರ ರೈಲು
ಭಾರತೀಯ ರೈಲ್ವೆ ಸಂಪೂರ್ಣ ದೇಸೀ ನಿರ್ಮಿತವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತ ಬ್ರಿಟಿಷರ ಆಳ್ವಿಕೆಗೆ ಒಳಪಟ್ಟು ಸ್ವಾತಂತ್ರ್ಯ ಪಡೆದ ನಂತರವೂ ೧೪೦೦ ರಿಂದ ೧೫೦೦ ಟನ್‌ನಷ್ಟು ತೂಕದ ರೈಲುಗಳೇ ದೇಶದಲ್ಲಿ ಸಂಚರಿಸುತ್ತಿವೆ. ಆದರೆ ವಂದೇ ಭಾರತ್ ರೈಲಿನ ತೂಕ ಕೇವಲ ೩೯೨ ಟನ್‌ನಷ್ಟು ಮಾತ್ರ ಇರುತ್ತದೆ. ಇದು ಭಾರತ ರೈಲ್ವೆ ಇತಿಹಾಸದಲ್ಲಿ ಅತ್ಯಂತ ಹಗುರ ತೂಕದ ರೈಲು ಇದಾಗಿದೆ. ಜಗತ್ತಿನ ಗಮನ ಸೆಳೆದಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.


* ವಂದೇ ಭಾರತ್ ರೈಲು ವಾರದ ೬ ದಿನಗಳಲ್ಲಿ ಸಂಚರಿಸಲಿದ್ದು, ಪ್ರತಿ ಬುಧವಾರ ಇದರ ಸಂಚಾರವಿರುವುದಿಲ್ಲ.

* ಮೈಸೂರು- ಚೆನ್ನೈ ನಡುವೆ ಈ ರೈಲು ಗಂಟೆಗೆ ೭೫ರಿಂದ ೭೭ ಕಿ.ಮೀ. ವೇಗದಲ್ಲಿ ಸಂಚಾರ

* ಚೆನ್ನೈನಿಂದ ಮುಂಜಾನೆ ೫.೫೦ಕ್ಕೆ ನಿರ್ಗಮನ

* ಮಧ್ಯಾಹ್ನ ೧೨.೩೦ಕ್ಕೆ ಮೈಸೂರು ನಿಲ್ದಾಣ ತಲುಪುವ ರೈಲು

* ಮತ್ತೆ ಮಧ್ಯಾಹ್ನ ೧.೫ಕ್ಕೆ ವಾಪಸ್ ಹೊರಟು ಬೆಂಗಳೂರಿಗೆ ೨.೨೫ಕ್ಕೆ ತಲುಪಲಿದೆ

* ಅಂದು ರಾತ್ರಿ ೭೩೫ಕ್ಕೆ ಚೆನ್ನೈ ತಲುಪಲಿದೆ

andolanait

Recent Posts

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

9 mins ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

15 mins ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

1 hour ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

2 hours ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

2 hours ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

3 hours ago