ಜಿಲ್ಲೆಗಳು

ನಾಳೆ ಮೈಸೂರಿಗೆ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು

ಮೈಸೂರಿಗೆ ನಾಳೆ ಬರಲಿರುವ ರೈಲು
ನ.೧೨ ರಂದು ಬೆಳಿಗ್ಗೆ ೫-೫೦ಕ್ಕೆ ವಂದೇ ಭಾರತ್ ರೈಲು ಚೆನ್ನೈ ನಿಲ್ದಾಣದಿಂದ ನಿರ್ಗಮಿಸಲಿದೆ.೧೦-೨೦ಕ್ಕೆ ಬೆಂಗಳೂರಿಗೆ ಆಗಮಿಸಿ ೧೦-೨೫ಕ್ಕೆ ಬೆಂಗಳೂರು ನಿಲ್ದಾಣ ಬಿಟ್ಟು ಮಧ್ಯಾಹ್ನ ೧೨-೨೦ ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಇದೇ ಸಮಯ ಮುಂದುವರಿಯಲಿದೆ.

ಮೈಸೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಯೋಜನೆಯ ಭಾಗವಾದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನ.೧೧ ರಂದು ಬೆಂಗಳೂರು- ಚೆನ್ನೈ ನಡುವೆ ಸಂಚಾರ ಆರಂಭಿಸಲಿದೆ.

ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಈ ಎಕ್ಸ್ ಪ್ರೆಸ್ ರೈಲನ್ನು ಪರಿಚಯಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ಈ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಇದು ಭಾರತದಲ್ಲಿ ಅತಿವೇಗದಲ್ಲಿ ಸಂಚರಿಸುವ ಪ್ರಪ್ರಥಮ ರೈಲಾಗಿದೆ.
ಈ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಭಾರತದಲ್ಲಿ ಪರಿಚಯಿಸುತ್ತಿರುವ ಐದನೆಯದಾಗಿದೆ. ಇದಕ್ಕೂ ಮೊದಲು ರಾಷ್ಟ್ರದ ರಾಜಧಾನಿ ಹೊಸದಿಲ್ಲಿ-ದೇಶದ ವಾಣಿಜ್ಯನಗರಿ ಮುಂಬೈ, ಗುಜರಾತ್‌ನ ಅಹಮದಾಬಾದ್ – ಕಾನ್‌ಪುರ- ವಾರಣಾಸಿ ಮತ್ತಿತರ ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ನಾಲ್ಕು ವಂದೇ ಭಾರತ್ ಅತಿವೇಗದ ಎಕ್ಸ್ ಪ್ರೆಸ್ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಈ ರೈಲು ಬೆಂಗಳೂರು ಮತ್ತು ಮೈಸೂರು ಹಾಗೂ ತಮಿಳುನಾಡು ರಾಜಧಾನಿ ಚೆನ್ನೈ ಮಹಾನಗರವನ್ನು ಸಂಪರ್ಕಿಸಲಿದೆ.
ಸುಸಜ್ಜಿತ ವ್ಯವಸ್ಥೆ: ಈ ಎಕ್ಸ್ ಪ್ರೆಸ್ ರೈಲು ಒಟ್ಟು ೧೬ ಬೋಗಿಗಳನ್ನು ಹೊಂದಿದ್ದು ಆಟೋಮ್ಯಾಟಿಕ್ ತಂತ್ರಜ್ಞಾನದ ಬಾಗಿಲುಗಳು ಮತ್ತು ೧೮೦ ಡಿಗ್ರಿಯಲ್ಲಿ ತಿರುಗಬಹುದಾಗ ಆಸನ ವ್ಯವಸ್ಥೆಯನ್ನು ಒಳಗೊಂಡಿರುತ್ತದೆ.ಒಂದು ವಂದೇ ಭಾರತ್ ರೈಲಿನ ಹದಿನಾರು ಬೋಗಿಗಳನ್ನು ತಯಾರಿಸಲು ೯೭ ಕೋಟಿ ರೂ.ವೆಚ್ಚ ತಗಲುತ್ತದೆ.
ಗಂಟೆಗೆ ಅತಿ ಹೆಚ್ಚು ಅಂದರೆ ೧೬೦ ರಿಂದ ೧೮೦ ಕಿ.ಮೀ. ವೇಗದಲ್ಲಿ ಸಂಚರಿಸುವ ಸಾಮರ್ಥ್ಯವಿರುವ ಈ ರೈಲು, ಶತಾಬ್ದಿ ರೈಲಿಗಿಂತ ವೇಗವಾಗಿ ಸಂಚರಿಸಲಿದೆ. ಈಗ ಮೈಸೂರು -ಚೆನ್ನೈ ನಡುವೆ ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿರುವ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಚೆನ್ನೈನಿಂದ ಮೈಸೂರು ತಲುಪಲು ೭.೧೫ ಗಂಟೆ ತೆಗೆದು ಕೊಳ್ಳುತ್ತದೆ.ಈಗ ಪರಿಚಯಿಸುತ್ತಿರುವ ವಂದೇ ಭಾರತ್ ೬.೪೦ ಗಂಟೆ ತೆಗೆದುಕೊಳ್ಳುತ್ತದೆ.ಈ ಎರಡೂ ರೈಲುಗಳ ಸಂಚಾರದ ವೇಗದಲ್ಲಿ ೩೫ ನಿಮಿಷ ಮಾತ್ರ ಅಂತರವಿದೆ.


ಅತಿ ಹಗುರ ರೈಲು
ಭಾರತೀಯ ರೈಲ್ವೆ ಸಂಪೂರ್ಣ ದೇಸೀ ನಿರ್ಮಿತವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತ ಬ್ರಿಟಿಷರ ಆಳ್ವಿಕೆಗೆ ಒಳಪಟ್ಟು ಸ್ವಾತಂತ್ರ್ಯ ಪಡೆದ ನಂತರವೂ ೧೪೦೦ ರಿಂದ ೧೫೦೦ ಟನ್‌ನಷ್ಟು ತೂಕದ ರೈಲುಗಳೇ ದೇಶದಲ್ಲಿ ಸಂಚರಿಸುತ್ತಿವೆ. ಆದರೆ ವಂದೇ ಭಾರತ್ ರೈಲಿನ ತೂಕ ಕೇವಲ ೩೯೨ ಟನ್‌ನಷ್ಟು ಮಾತ್ರ ಇರುತ್ತದೆ. ಇದು ಭಾರತ ರೈಲ್ವೆ ಇತಿಹಾಸದಲ್ಲಿ ಅತ್ಯಂತ ಹಗುರ ತೂಕದ ರೈಲು ಇದಾಗಿದೆ. ಜಗತ್ತಿನ ಗಮನ ಸೆಳೆದಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.


* ವಂದೇ ಭಾರತ್ ರೈಲು ವಾರದ ೬ ದಿನಗಳಲ್ಲಿ ಸಂಚರಿಸಲಿದ್ದು, ಪ್ರತಿ ಬುಧವಾರ ಇದರ ಸಂಚಾರವಿರುವುದಿಲ್ಲ.

* ಮೈಸೂರು- ಚೆನ್ನೈ ನಡುವೆ ಈ ರೈಲು ಗಂಟೆಗೆ ೭೫ರಿಂದ ೭೭ ಕಿ.ಮೀ. ವೇಗದಲ್ಲಿ ಸಂಚಾರ

* ಚೆನ್ನೈನಿಂದ ಮುಂಜಾನೆ ೫.೫೦ಕ್ಕೆ ನಿರ್ಗಮನ

* ಮಧ್ಯಾಹ್ನ ೧೨.೩೦ಕ್ಕೆ ಮೈಸೂರು ನಿಲ್ದಾಣ ತಲುಪುವ ರೈಲು

* ಮತ್ತೆ ಮಧ್ಯಾಹ್ನ ೧.೫ಕ್ಕೆ ವಾಪಸ್ ಹೊರಟು ಬೆಂಗಳೂರಿಗೆ ೨.೨೫ಕ್ಕೆ ತಲುಪಲಿದೆ

* ಅಂದು ರಾತ್ರಿ ೭೩೫ಕ್ಕೆ ಚೆನ್ನೈ ತಲುಪಲಿದೆ

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago