ಚಾಮರಾಜನಗರ: ರಾಜ್ಯ ಸರ್ಕಾರ ಜಿಲ್ಲೆಗೆ ಮಳೆ ಹಾನಿ ಪರಿಹಾರ ಹಾಗೂ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಅವರು ಹೆಗಲಿಗೆ ಗೋಣಿಚೀಲ ಹಾಕಿಕೊಂಡು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಭವನದ ಮುಂಭಾಗ ತಮ್ಮ ಬೆಂಬಲಿಗರೊಂದಿಗೆ ಜಮಾಯಿಸಿದ ಅವರು, ನಿರಂತರ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಫಸಲು, ಆಸ್ತಿ, ಮನೆ ಹಾನಿಯಾಗಿದೆ. ಸೂಕ್ತ ಪರಿಹಾರ ನೀಡಿಲ್ಲ ಎಂದು ದೂರಿದರು.
ಕೊರೊನಾ ಸಂದರ್ಭದಲ್ಲಿ ಸುಮಾರು ೨೭ ಜನರು ಆಕ್ಸಿಜನ್ ದುರಂತದಲ್ಲಿ ಮೃತಪಟ್ಟರೂ ಸಂಸದರು, ಸಚಿವರು, ಶಾಸಕರು, ಮುಖ್ಯಮಂತ್ರಿ ಕಾಳಜಿ ತೋರಲಿಲ್ಲ. ಮೃತರ ಕುಟುಂಬದವರು ತಬ್ಬಲಿಯಾದರು ಅವರಿಗೆ ನ್ಯಾಯಯುತ ಪರಿಹಾರ ನೀಡಲಿಲ್ಲ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳೇ ಈ ಜಿಲ್ಲೆಗೆ ಎಷ್ಟು ಹಾಗೂ ಬೇರೆ ಜಿಲ್ಲೆಗಳಿಗೆ ಎಷ್ಟೇಷ್ಟು ಅನುದಾನ ಕೊಟ್ಟಿದ್ದೀರಿ ಎಂಬುದರ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ. ಹಿಂದುಳಿದ ಈ ಗಡಿ ಜಿಲ್ಲೆಯನ್ನು ಕಡೆಗಣಿಸಲು ಏನು ಕಾರಣ. ಇದು ಒಳ್ಳೆಯದಲ್ಲ. ಇದೇ ರೀತಿ ಮುಂದುವರೆಸಿದರೆ ನಗರಕ್ಕೆ ಮಂತ್ರಿಗಳು ನಗರಕ್ಕೆ ಆಗಮಿಸದಂತೆ ತಡೆಯುವುದಾಗಿ ಎಚ್ಚರಿಸಿದರು.
ರಾಜೀನಾಮೆ ನೀಡಲಿ: ಸಚಿವರಾಗಿ ಮಹಿಳೆಗೆ ಹೊಡೆಯುವುದು ಖಂಡನೀಯ. ಇಷ್ಟೋತಿಗಾಗಲೇ ಮುಖ್ಯಮಂತ್ರಿ ತಮ್ಮ ಸರ್ಕಾರದ ನಿಲುವನ್ನು ಪ್ರಕಟಿ ಮಾಡಬೇಕಿತ್ತು. ವಿ.ಸೋಮಣ್ಣ ಅವರ ಬಗ್ಗೆ ನನಗೆ ಗೌರವವಿದೆ. ಆದರೆ ರಾಜೀನಾಮೆಯನ್ನು ಇಷ್ಟೋತ್ತಿಗೆ ಕೊಟ್ಟಿದ್ರೆ ಅವರಿಗೆ ಗೌರವ ಬರುತ್ತಿತ್ತು. ಮಹಿಳೆಯ ಕಪಾಲಕ್ಕೆ ಮಂತ್ರಿ ಹೊಡೆಯುವುದು ಅನಾಗರೀಕ ವರ್ತನೆಯಾಗಿದೆ ಎಂದರು.
ಪ್ರತಿಭಟನೆಯಲ್ಲಿ ಅಜಯ್, ಹುಂಡಿಬಸವಣ್ಣ, ವಡ್ರಹಳ್ಳಿ ಮಹೇಶ್, ಶಿವಲಿಂಗಮೂರ್ತಿ, ಗೋಪಾಲನಾಯಕ, ಪಾರ್ಥಸಾರಥಿ, ಚಾ.ರಾ.ಕುಮಾರ್, ಕೊ.ನ.ನಾಗರಾಜು ಭಾಗವಹಿಸಿದ್ದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…
ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…
ಮಂಡ್ಯ: 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್ ಶಾಸಕ ಗಣಿಗ…
ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…
ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…