ಚಾಮರಾಜನಗರ: ರಾಜ್ಯ ಸರ್ಕಾರ ಜಿಲ್ಲೆಗೆ ಮಳೆ ಹಾನಿ ಪರಿಹಾರ ಹಾಗೂ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಅವರು ಹೆಗಲಿಗೆ ಗೋಣಿಚೀಲ ಹಾಕಿಕೊಂಡು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಭವನದ ಮುಂಭಾಗ ತಮ್ಮ ಬೆಂಬಲಿಗರೊಂದಿಗೆ ಜಮಾಯಿಸಿದ ಅವರು, ನಿರಂತರ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಫಸಲು, ಆಸ್ತಿ, ಮನೆ ಹಾನಿಯಾಗಿದೆ. ಸೂಕ್ತ ಪರಿಹಾರ ನೀಡಿಲ್ಲ ಎಂದು ದೂರಿದರು.
ಕೊರೊನಾ ಸಂದರ್ಭದಲ್ಲಿ ಸುಮಾರು ೨೭ ಜನರು ಆಕ್ಸಿಜನ್ ದುರಂತದಲ್ಲಿ ಮೃತಪಟ್ಟರೂ ಸಂಸದರು, ಸಚಿವರು, ಶಾಸಕರು, ಮುಖ್ಯಮಂತ್ರಿ ಕಾಳಜಿ ತೋರಲಿಲ್ಲ. ಮೃತರ ಕುಟುಂಬದವರು ತಬ್ಬಲಿಯಾದರು ಅವರಿಗೆ ನ್ಯಾಯಯುತ ಪರಿಹಾರ ನೀಡಲಿಲ್ಲ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳೇ ಈ ಜಿಲ್ಲೆಗೆ ಎಷ್ಟು ಹಾಗೂ ಬೇರೆ ಜಿಲ್ಲೆಗಳಿಗೆ ಎಷ್ಟೇಷ್ಟು ಅನುದಾನ ಕೊಟ್ಟಿದ್ದೀರಿ ಎಂಬುದರ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ. ಹಿಂದುಳಿದ ಈ ಗಡಿ ಜಿಲ್ಲೆಯನ್ನು ಕಡೆಗಣಿಸಲು ಏನು ಕಾರಣ. ಇದು ಒಳ್ಳೆಯದಲ್ಲ. ಇದೇ ರೀತಿ ಮುಂದುವರೆಸಿದರೆ ನಗರಕ್ಕೆ ಮಂತ್ರಿಗಳು ನಗರಕ್ಕೆ ಆಗಮಿಸದಂತೆ ತಡೆಯುವುದಾಗಿ ಎಚ್ಚರಿಸಿದರು.
ರಾಜೀನಾಮೆ ನೀಡಲಿ: ಸಚಿವರಾಗಿ ಮಹಿಳೆಗೆ ಹೊಡೆಯುವುದು ಖಂಡನೀಯ. ಇಷ್ಟೋತಿಗಾಗಲೇ ಮುಖ್ಯಮಂತ್ರಿ ತಮ್ಮ ಸರ್ಕಾರದ ನಿಲುವನ್ನು ಪ್ರಕಟಿ ಮಾಡಬೇಕಿತ್ತು. ವಿ.ಸೋಮಣ್ಣ ಅವರ ಬಗ್ಗೆ ನನಗೆ ಗೌರವವಿದೆ. ಆದರೆ ರಾಜೀನಾಮೆಯನ್ನು ಇಷ್ಟೋತ್ತಿಗೆ ಕೊಟ್ಟಿದ್ರೆ ಅವರಿಗೆ ಗೌರವ ಬರುತ್ತಿತ್ತು. ಮಹಿಳೆಯ ಕಪಾಲಕ್ಕೆ ಮಂತ್ರಿ ಹೊಡೆಯುವುದು ಅನಾಗರೀಕ ವರ್ತನೆಯಾಗಿದೆ ಎಂದರು.
ಪ್ರತಿಭಟನೆಯಲ್ಲಿ ಅಜಯ್, ಹುಂಡಿಬಸವಣ್ಣ, ವಡ್ರಹಳ್ಳಿ ಮಹೇಶ್, ಶಿವಲಿಂಗಮೂರ್ತಿ, ಗೋಪಾಲನಾಯಕ, ಪಾರ್ಥಸಾರಥಿ, ಚಾ.ರಾ.ಕುಮಾರ್, ಕೊ.ನ.ನಾಗರಾಜು ಭಾಗವಹಿಸಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…