ಚಾಮರಾಜನಗರ: ರಾಜ್ಯ ಸರ್ಕಾರ ಜಿಲ್ಲೆಗೆ ಮಳೆ ಹಾನಿ ಪರಿಹಾರ ಹಾಗೂ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಅವರು ಹೆಗಲಿಗೆ ಗೋಣಿಚೀಲ ಹಾಕಿಕೊಂಡು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಭವನದ ಮುಂಭಾಗ ತಮ್ಮ ಬೆಂಬಲಿಗರೊಂದಿಗೆ ಜಮಾಯಿಸಿದ ಅವರು, ನಿರಂತರ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಫಸಲು, ಆಸ್ತಿ, ಮನೆ ಹಾನಿಯಾಗಿದೆ. ಸೂಕ್ತ ಪರಿಹಾರ ನೀಡಿಲ್ಲ ಎಂದು ದೂರಿದರು.
ಕೊರೊನಾ ಸಂದರ್ಭದಲ್ಲಿ ಸುಮಾರು ೨೭ ಜನರು ಆಕ್ಸಿಜನ್ ದುರಂತದಲ್ಲಿ ಮೃತಪಟ್ಟರೂ ಸಂಸದರು, ಸಚಿವರು, ಶಾಸಕರು, ಮುಖ್ಯಮಂತ್ರಿ ಕಾಳಜಿ ತೋರಲಿಲ್ಲ. ಮೃತರ ಕುಟುಂಬದವರು ತಬ್ಬಲಿಯಾದರು ಅವರಿಗೆ ನ್ಯಾಯಯುತ ಪರಿಹಾರ ನೀಡಲಿಲ್ಲ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳೇ ಈ ಜಿಲ್ಲೆಗೆ ಎಷ್ಟು ಹಾಗೂ ಬೇರೆ ಜಿಲ್ಲೆಗಳಿಗೆ ಎಷ್ಟೇಷ್ಟು ಅನುದಾನ ಕೊಟ್ಟಿದ್ದೀರಿ ಎಂಬುದರ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ. ಹಿಂದುಳಿದ ಈ ಗಡಿ ಜಿಲ್ಲೆಯನ್ನು ಕಡೆಗಣಿಸಲು ಏನು ಕಾರಣ. ಇದು ಒಳ್ಳೆಯದಲ್ಲ. ಇದೇ ರೀತಿ ಮುಂದುವರೆಸಿದರೆ ನಗರಕ್ಕೆ ಮಂತ್ರಿಗಳು ನಗರಕ್ಕೆ ಆಗಮಿಸದಂತೆ ತಡೆಯುವುದಾಗಿ ಎಚ್ಚರಿಸಿದರು.
ರಾಜೀನಾಮೆ ನೀಡಲಿ: ಸಚಿವರಾಗಿ ಮಹಿಳೆಗೆ ಹೊಡೆಯುವುದು ಖಂಡನೀಯ. ಇಷ್ಟೋತಿಗಾಗಲೇ ಮುಖ್ಯಮಂತ್ರಿ ತಮ್ಮ ಸರ್ಕಾರದ ನಿಲುವನ್ನು ಪ್ರಕಟಿ ಮಾಡಬೇಕಿತ್ತು. ವಿ.ಸೋಮಣ್ಣ ಅವರ ಬಗ್ಗೆ ನನಗೆ ಗೌರವವಿದೆ. ಆದರೆ ರಾಜೀನಾಮೆಯನ್ನು ಇಷ್ಟೋತ್ತಿಗೆ ಕೊಟ್ಟಿದ್ರೆ ಅವರಿಗೆ ಗೌರವ ಬರುತ್ತಿತ್ತು. ಮಹಿಳೆಯ ಕಪಾಲಕ್ಕೆ ಮಂತ್ರಿ ಹೊಡೆಯುವುದು ಅನಾಗರೀಕ ವರ್ತನೆಯಾಗಿದೆ ಎಂದರು.
ಪ್ರತಿಭಟನೆಯಲ್ಲಿ ಅಜಯ್, ಹುಂಡಿಬಸವಣ್ಣ, ವಡ್ರಹಳ್ಳಿ ಮಹೇಶ್, ಶಿವಲಿಂಗಮೂರ್ತಿ, ಗೋಪಾಲನಾಯಕ, ಪಾರ್ಥಸಾರಥಿ, ಚಾ.ರಾ.ಕುಮಾರ್, ಕೊ.ನ.ನಾಗರಾಜು ಭಾಗವಹಿಸಿದ್ದರು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…