ಜಿಲ್ಲೆಗಳು

ವಾಲ್ಮೀಕಿ ಜಯಂತಿ ಸಂಭ್ರಮ ಹೆಚ್ಚಿಸಿದ ಮೀಸಲು ಹೆಚ್ಚಳ

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗಕ್ಕೆ ಮೀಸಲು ಹೆಚ್ಚಿಸುವ ಸರಕಾರದ ನಿರ್ಧಾರ ಈ ಸಮುದಾಯದಲ್ಲಿ ಹರ್ಷ ಮೂಡಿಸಿದೆ. ಭಾನುವಾರ ಮೈಸೂರಿನ ಕಲಾಮಂದಿರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಈ ಸಂತಸ ಸ್ಪಷ್ಟವಾಗಿ ಕಾಣುತ್ತಿತ್ತು.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ಮತ್ತು ನಗರ ಮತ್ತು ತಾಲ್ಲೂಕು ನಾಯಕ ಸಮಾಜಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಜಗತ್ತಿಗೆ ರಾಮಾಯಣದಂತಹ ಮಹಾಕಾವ್ಯವನ್ನು ನೀಡಿ ಸಮಾಜದ ಪರಿವರ್ತನೆಗೆ ಕಾರಣವಾಗಿರುವ ವಾಲ್ಮೀಕಿ ಜೀವನದ ಆದರ್ಶವನ್ನು ಇಂದಿನ ಯುವ ಜನತೆ ಅರಿತುಕೊಳ್ಳಬೇಕು. ಅವರ ಆದರ್ಶಗಳು ಅನುಕರಣೀಯ ಎಂದರು.

ವಾಲ್ಮೀಕಿ ಮಹರ್ಷಿ ಜೀವನದ ವಿಚಾರಧಾರೆ ತಿಳಿಸುವ ಕೆಲಸ ಮಾಡಬೇಕು. ಅವಕಾಶವಿಲ್ಲದೆ ಅನಕ್ಷರಸ್ಥ ಸಮಾಜಗಳು ಇಂದು ಶಿಕ್ಷಣ ಪಡೆಯುವ ಜತೆಗೆ ನೂರರಷ್ಟು ಅಂಕಗಳನ್ನು ಪಡೆಯುತ್ತಿರುವ ಮಟ್ಟಿಗೆ ಬಂದಿರುವುದು ದೊಡ್ಡ ಸಾಧನೆಯಾಗಿದೆ ಎಂದು ಶಾಸಕ ತನ್ವೀರ್ಸೇಠ್ ಅಭಿಪ್ರಾಯಪಟ್ಟರು.

ಬಿಜೆಪಿ ಸರಕಾರ ತಳ ಸಮುದಾಯದ ಪರವಾಗಿದೆ. ಸಾಮಾನ್ಯ ವರ್ಗದಲ್ಲಿ ಹಲವು ಸದಸ್ಯರಿದ್ದರೂ ನಾಯಕ ಸಮಾಜಕ್ಕೆ ಅವಕಾಶ ಮಾಡಿಕೊಡಬೇಕು ಎನ್ನುವ ಕಾರಣಕ್ಕಾಗಿ ಶಿವಕುಮಾರ್ ಅವರನ್ನು ಮಹಾಪೌರರನ್ನಾಗಿ ಮಾಡಲಾಯಿತು. ಒಬ್ಬ ಆದಿವಾಸಿ ಸಮಾಜಕ್ಕೆ ಸೇರಿದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಲಾಯಿತು ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು.

ಮಹಾಪೌರ ಶಿವಕುಮಾರ್ ಮಾತನಾಡಿ, ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಸ್ವಾಮೀಜಿ ನಡೆಸಿದ ಹೋರಾಟಕ್ಕೆ ಸರ್ಕಾರ ಕೊನೆಗೂ ಸ್ಪಂದಿಸಿದೆ. ಶೇ. 3ರಿಂದ 7ಕ್ಕೆ ಜಾಸ್ತಿ ಮಾಡಿರುವುದರಿಂದ ಈ ಸಮುದಾಯದ ಬೆಳವಣಿಗೆಗೆ ಅನುಕೂಲವಾಗಿದೆ. 30 ವರ್ಷಗಳ ಕಾಲದಿಂದಲೂ ನೆನಗುದಿಗೆ ಬಿದ್ದಿದ್ದ ತಳವಾರ ಮತ್ತು ಪರಿವಾರವನ್ನು ಎಸ್ಟಿಗೆ ಸೇರಿಸಿದ್ದು, ಬಿಜೆಪಿ ಸರ್ಕಾರ ಎಂಬುದು ಸಂತೋಷದ ವಿಚಾರ ಎಂದು ಹೇಳಿದರು.

ಸಹಾಯಕ ಪ್ರಾಧ್ಯಾಪಕ ಹರದನಹಳ್ಳಿ ಬಿ.ನಂಜುಂಡಸ್ವಾಮಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಅಂಕ ಪಡೆದ ವಿದ್ಯಾರ್ಥಿನಿ ಚಾರುಕೀರ್ತಿಯನ್ನು ಸನ್ಮಾನಿಸಿ ಒಂದು ಲಕ್ಷ ರೂ. ಪ್ರೋತ್ಸಾಹಧನದ ಚೆಕ್ ಅನ್ನು ವಿತರಿಸಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮೈಲ್ಯಾಕ್ ಅಧ್ಯಕ್ಷ ಆರ್.ರಘು, ಉಪ ಮಹಾಪೌರರಾದ ಡಾ.ಜಿ.ರೂಪಾ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಪಂ ಉಪ ಕಾರ್ಯದರ್ಶಿ ಎಂ.ಪ್ರೇಮ್ ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯೋಜನಾ ಸಮನ್ವಯ ಅಧಿಕಾರಿ ಬಿ.ಎಸ್.ಪ್ರಭಾ ಅರಸ್, ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಜರಿದ್ದರು.

andolana

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

9 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

10 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

10 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

10 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

10 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

10 hours ago