ಜಿಲ್ಲೆಗಳು

ವಾಲ್ಮೀಕಿ ಜಯಂತಿ ಸಂಭ್ರಮ ಹೆಚ್ಚಿಸಿದ ಮೀಸಲು ಹೆಚ್ಚಳ

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗಕ್ಕೆ ಮೀಸಲು ಹೆಚ್ಚಿಸುವ ಸರಕಾರದ ನಿರ್ಧಾರ ಈ ಸಮುದಾಯದಲ್ಲಿ ಹರ್ಷ ಮೂಡಿಸಿದೆ. ಭಾನುವಾರ ಮೈಸೂರಿನ ಕಲಾಮಂದಿರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಈ ಸಂತಸ ಸ್ಪಷ್ಟವಾಗಿ ಕಾಣುತ್ತಿತ್ತು.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ಮತ್ತು ನಗರ ಮತ್ತು ತಾಲ್ಲೂಕು ನಾಯಕ ಸಮಾಜಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಜಗತ್ತಿಗೆ ರಾಮಾಯಣದಂತಹ ಮಹಾಕಾವ್ಯವನ್ನು ನೀಡಿ ಸಮಾಜದ ಪರಿವರ್ತನೆಗೆ ಕಾರಣವಾಗಿರುವ ವಾಲ್ಮೀಕಿ ಜೀವನದ ಆದರ್ಶವನ್ನು ಇಂದಿನ ಯುವ ಜನತೆ ಅರಿತುಕೊಳ್ಳಬೇಕು. ಅವರ ಆದರ್ಶಗಳು ಅನುಕರಣೀಯ ಎಂದರು.

ವಾಲ್ಮೀಕಿ ಮಹರ್ಷಿ ಜೀವನದ ವಿಚಾರಧಾರೆ ತಿಳಿಸುವ ಕೆಲಸ ಮಾಡಬೇಕು. ಅವಕಾಶವಿಲ್ಲದೆ ಅನಕ್ಷರಸ್ಥ ಸಮಾಜಗಳು ಇಂದು ಶಿಕ್ಷಣ ಪಡೆಯುವ ಜತೆಗೆ ನೂರರಷ್ಟು ಅಂಕಗಳನ್ನು ಪಡೆಯುತ್ತಿರುವ ಮಟ್ಟಿಗೆ ಬಂದಿರುವುದು ದೊಡ್ಡ ಸಾಧನೆಯಾಗಿದೆ ಎಂದು ಶಾಸಕ ತನ್ವೀರ್ಸೇಠ್ ಅಭಿಪ್ರಾಯಪಟ್ಟರು.

ಬಿಜೆಪಿ ಸರಕಾರ ತಳ ಸಮುದಾಯದ ಪರವಾಗಿದೆ. ಸಾಮಾನ್ಯ ವರ್ಗದಲ್ಲಿ ಹಲವು ಸದಸ್ಯರಿದ್ದರೂ ನಾಯಕ ಸಮಾಜಕ್ಕೆ ಅವಕಾಶ ಮಾಡಿಕೊಡಬೇಕು ಎನ್ನುವ ಕಾರಣಕ್ಕಾಗಿ ಶಿವಕುಮಾರ್ ಅವರನ್ನು ಮಹಾಪೌರರನ್ನಾಗಿ ಮಾಡಲಾಯಿತು. ಒಬ್ಬ ಆದಿವಾಸಿ ಸಮಾಜಕ್ಕೆ ಸೇರಿದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಲಾಯಿತು ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು.

ಮಹಾಪೌರ ಶಿವಕುಮಾರ್ ಮಾತನಾಡಿ, ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಸ್ವಾಮೀಜಿ ನಡೆಸಿದ ಹೋರಾಟಕ್ಕೆ ಸರ್ಕಾರ ಕೊನೆಗೂ ಸ್ಪಂದಿಸಿದೆ. ಶೇ. 3ರಿಂದ 7ಕ್ಕೆ ಜಾಸ್ತಿ ಮಾಡಿರುವುದರಿಂದ ಈ ಸಮುದಾಯದ ಬೆಳವಣಿಗೆಗೆ ಅನುಕೂಲವಾಗಿದೆ. 30 ವರ್ಷಗಳ ಕಾಲದಿಂದಲೂ ನೆನಗುದಿಗೆ ಬಿದ್ದಿದ್ದ ತಳವಾರ ಮತ್ತು ಪರಿವಾರವನ್ನು ಎಸ್ಟಿಗೆ ಸೇರಿಸಿದ್ದು, ಬಿಜೆಪಿ ಸರ್ಕಾರ ಎಂಬುದು ಸಂತೋಷದ ವಿಚಾರ ಎಂದು ಹೇಳಿದರು.

ಸಹಾಯಕ ಪ್ರಾಧ್ಯಾಪಕ ಹರದನಹಳ್ಳಿ ಬಿ.ನಂಜುಂಡಸ್ವಾಮಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಅಂಕ ಪಡೆದ ವಿದ್ಯಾರ್ಥಿನಿ ಚಾರುಕೀರ್ತಿಯನ್ನು ಸನ್ಮಾನಿಸಿ ಒಂದು ಲಕ್ಷ ರೂ. ಪ್ರೋತ್ಸಾಹಧನದ ಚೆಕ್ ಅನ್ನು ವಿತರಿಸಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮೈಲ್ಯಾಕ್ ಅಧ್ಯಕ್ಷ ಆರ್.ರಘು, ಉಪ ಮಹಾಪೌರರಾದ ಡಾ.ಜಿ.ರೂಪಾ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಪಂ ಉಪ ಕಾರ್ಯದರ್ಶಿ ಎಂ.ಪ್ರೇಮ್ ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯೋಜನಾ ಸಮನ್ವಯ ಅಧಿಕಾರಿ ಬಿ.ಎಸ್.ಪ್ರಭಾ ಅರಸ್, ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಜರಿದ್ದರು.

andolana

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

2 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

2 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

2 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

2 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

2 hours ago