Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಹನೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ನಾಯಕ ಜನಾಂಗದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕ ಅನಾವರಣಗೊಳಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹರ್ಷಿಗಳ ತತ್ವ ಆದರ್ಶಗಳು ಅನುಕರಣೀಯ. ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಉನ್ನತ ಶಿಕ್ಷಣ ಹಾಗೂ ಐಎಎಸ್, ಕೆಎಎಸ್ ವಿದ್ಯಾಭ್ಯಾಸ ಮಾಡುವವರು ಇದ್ದರೆ ಅಂತಹವರಿಗೆ ನಾವು ಸಹಕಾರವನ್ನು ನೀಡುತ್ತೇವೆ. ಪ್ರಸ್ತುತ 21ನೇ ಶತಮಾನದಲ್ಲಿ ಕೂಡ ನಮ್ಮ ಮೂಲಭೂತ ಸೌಕರ್ಯಗಳನ್ನು ಪಡೆಯಲು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನತೆ ರಾಜಕೀಯಕ್ಕೆ ಕೊಡುವ ಒತ್ತನ್ನು ಅಭಿವೃದ್ಧಿಗೆ ಕೊಡಬೇಕು. ಕ್ಷೇತ್ರದ ಗೋಪಿನಾಥಮ್, ಮ.ಮ.ಬೆಟ್ಟ ಜನತೆ ಅದರಲ್ಲೂ ಗರ್ಭಿಣಿಯರು ಸ್ಕ್ಯಾನಿಂಗ್ ಮಾಡಿಸಲು 120 ಕಿ.ಮೀ.ಅಂತರ ಹೋಗಬೇಕಾದ ದುಃಸ್ಥಿತಿ ಎದುರಾಗಿದೆ. ಇದೇ ರೀತಿ ಡಯಾಲಿಸಸ್, ಉತ್ತಮ ವೈದ್ಯಕೀಯ ಸೇವೆ ಪಡೆಯಲು ನೂರಾರು ಕಿ.ಮೀ. ತೆರಳಬೇಕಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಮತ್ತು ಚಾಮರಾಜನಗರ ನಾಯಕ ಸಂಘದ ಅಧ್ಯಕ್ಷರಾದ ಕೆಲ್ಲಂಬಳ್ಳಿ ಸೋಮನಾಯಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ನಿಧಿ ಮಾಜಿ ಅಧ್ಯಕ್ಷರಾದ ರಾಮಚಂದ್ರ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ, ಶ್ರೀನಿವಾಸನಾಯಕ, ಮಂಜುನಾಥ್, ವೆಂಕಟೇಶ್, ಚಿಕ್ಕಮಾದ ನಾಯಕ, ಶಾಂತಮೂರ್ತಿ, ಸದಸ್ಯರಾದ ರಾಧಾ, ಮಾದಪ್ಪ, ಪ್ರಸಾದ್, ಬಾಲು, ತಿರುಪತಿ, ರಾಚಪ್ಪ, ಮಣಿ ಸೇರಿದಂತೆ ನಾಯಕ ಸಮುದಾಯದ ಮುಖಂಡರು, ಯಜಮಾನರುಗಳು, ಯುವಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!