ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು.
ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ನಾಯಕ ಜನಾಂಗದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕ ಅನಾವರಣಗೊಳಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹರ್ಷಿಗಳ ತತ್ವ ಆದರ್ಶಗಳು ಅನುಕರಣೀಯ. ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಉನ್ನತ ಶಿಕ್ಷಣ ಹಾಗೂ ಐಎಎಸ್, ಕೆಎಎಸ್ ವಿದ್ಯಾಭ್ಯಾಸ ಮಾಡುವವರು ಇದ್ದರೆ ಅಂತಹವರಿಗೆ ನಾವು ಸಹಕಾರವನ್ನು ನೀಡುತ್ತೇವೆ. ಪ್ರಸ್ತುತ 21ನೇ ಶತಮಾನದಲ್ಲಿ ಕೂಡ ನಮ್ಮ ಮೂಲಭೂತ ಸೌಕರ್ಯಗಳನ್ನು ಪಡೆಯಲು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನತೆ ರಾಜಕೀಯಕ್ಕೆ ಕೊಡುವ ಒತ್ತನ್ನು ಅಭಿವೃದ್ಧಿಗೆ ಕೊಡಬೇಕು. ಕ್ಷೇತ್ರದ ಗೋಪಿನಾಥಮ್, ಮ.ಮ.ಬೆಟ್ಟ ಜನತೆ ಅದರಲ್ಲೂ ಗರ್ಭಿಣಿಯರು ಸ್ಕ್ಯಾನಿಂಗ್ ಮಾಡಿಸಲು 120 ಕಿ.ಮೀ.ಅಂತರ ಹೋಗಬೇಕಾದ ದುಃಸ್ಥಿತಿ ಎದುರಾಗಿದೆ. ಇದೇ ರೀತಿ ಡಯಾಲಿಸಸ್, ಉತ್ತಮ ವೈದ್ಯಕೀಯ ಸೇವೆ ಪಡೆಯಲು ನೂರಾರು ಕಿ.ಮೀ. ತೆರಳಬೇಕಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಮತ್ತು ಚಾಮರಾಜನಗರ ನಾಯಕ ಸಂಘದ ಅಧ್ಯಕ್ಷರಾದ ಕೆಲ್ಲಂಬಳ್ಳಿ ಸೋಮನಾಯಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ನಿಧಿ ಮಾಜಿ ಅಧ್ಯಕ್ಷರಾದ ರಾಮಚಂದ್ರ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ, ಶ್ರೀನಿವಾಸನಾಯಕ, ಮಂಜುನಾಥ್, ವೆಂಕಟೇಶ್, ಚಿಕ್ಕಮಾದ ನಾಯಕ, ಶಾಂತಮೂರ್ತಿ, ಸದಸ್ಯರಾದ ರಾಧಾ, ಮಾದಪ್ಪ, ಪ್ರಸಾದ್, ಬಾಲು, ತಿರುಪತಿ, ರಾಚಪ್ಪ, ಮಣಿ ಸೇರಿದಂತೆ ನಾಯಕ ಸಮುದಾಯದ ಮುಖಂಡರು, ಯಜಮಾನರುಗಳು, ಯುವಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…