ಜಿಲ್ಲೆಗಳು

ಹನೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ನಾಯಕ ಜನಾಂಗದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕ ಅನಾವರಣಗೊಳಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹರ್ಷಿಗಳ ತತ್ವ ಆದರ್ಶಗಳು ಅನುಕರಣೀಯ. ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಉನ್ನತ ಶಿಕ್ಷಣ ಹಾಗೂ ಐಎಎಸ್, ಕೆಎಎಸ್ ವಿದ್ಯಾಭ್ಯಾಸ ಮಾಡುವವರು ಇದ್ದರೆ ಅಂತಹವರಿಗೆ ನಾವು ಸಹಕಾರವನ್ನು ನೀಡುತ್ತೇವೆ. ಪ್ರಸ್ತುತ 21ನೇ ಶತಮಾನದಲ್ಲಿ ಕೂಡ ನಮ್ಮ ಮೂಲಭೂತ ಸೌಕರ್ಯಗಳನ್ನು ಪಡೆಯಲು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನತೆ ರಾಜಕೀಯಕ್ಕೆ ಕೊಡುವ ಒತ್ತನ್ನು ಅಭಿವೃದ್ಧಿಗೆ ಕೊಡಬೇಕು. ಕ್ಷೇತ್ರದ ಗೋಪಿನಾಥಮ್, ಮ.ಮ.ಬೆಟ್ಟ ಜನತೆ ಅದರಲ್ಲೂ ಗರ್ಭಿಣಿಯರು ಸ್ಕ್ಯಾನಿಂಗ್ ಮಾಡಿಸಲು 120 ಕಿ.ಮೀ.ಅಂತರ ಹೋಗಬೇಕಾದ ದುಃಸ್ಥಿತಿ ಎದುರಾಗಿದೆ. ಇದೇ ರೀತಿ ಡಯಾಲಿಸಸ್, ಉತ್ತಮ ವೈದ್ಯಕೀಯ ಸೇವೆ ಪಡೆಯಲು ನೂರಾರು ಕಿ.ಮೀ. ತೆರಳಬೇಕಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಮತ್ತು ಚಾಮರಾಜನಗರ ನಾಯಕ ಸಂಘದ ಅಧ್ಯಕ್ಷರಾದ ಕೆಲ್ಲಂಬಳ್ಳಿ ಸೋಮನಾಯಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ನಿಧಿ ಮಾಜಿ ಅಧ್ಯಕ್ಷರಾದ ರಾಮಚಂದ್ರ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ, ಶ್ರೀನಿವಾಸನಾಯಕ, ಮಂಜುನಾಥ್, ವೆಂಕಟೇಶ್, ಚಿಕ್ಕಮಾದ ನಾಯಕ, ಶಾಂತಮೂರ್ತಿ, ಸದಸ್ಯರಾದ ರಾಧಾ, ಮಾದಪ್ಪ, ಪ್ರಸಾದ್, ಬಾಲು, ತಿರುಪತಿ, ರಾಚಪ್ಪ, ಮಣಿ ಸೇರಿದಂತೆ ನಾಯಕ ಸಮುದಾಯದ ಮುಖಂಡರು, ಯಜಮಾನರುಗಳು, ಯುವಕರು, ಸಾರ್ವಜನಿಕರು ಉಪಸ್ಥಿತರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

9 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

15 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

15 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

15 hours ago