ಜಿಲ್ಲೆಗಳು

ಹನೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ನಾಯಕ ಜನಾಂಗದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕ ಅನಾವರಣಗೊಳಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹರ್ಷಿಗಳ ತತ್ವ ಆದರ್ಶಗಳು ಅನುಕರಣೀಯ. ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಉನ್ನತ ಶಿಕ್ಷಣ ಹಾಗೂ ಐಎಎಸ್, ಕೆಎಎಸ್ ವಿದ್ಯಾಭ್ಯಾಸ ಮಾಡುವವರು ಇದ್ದರೆ ಅಂತಹವರಿಗೆ ನಾವು ಸಹಕಾರವನ್ನು ನೀಡುತ್ತೇವೆ. ಪ್ರಸ್ತುತ 21ನೇ ಶತಮಾನದಲ್ಲಿ ಕೂಡ ನಮ್ಮ ಮೂಲಭೂತ ಸೌಕರ್ಯಗಳನ್ನು ಪಡೆಯಲು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನತೆ ರಾಜಕೀಯಕ್ಕೆ ಕೊಡುವ ಒತ್ತನ್ನು ಅಭಿವೃದ್ಧಿಗೆ ಕೊಡಬೇಕು. ಕ್ಷೇತ್ರದ ಗೋಪಿನಾಥಮ್, ಮ.ಮ.ಬೆಟ್ಟ ಜನತೆ ಅದರಲ್ಲೂ ಗರ್ಭಿಣಿಯರು ಸ್ಕ್ಯಾನಿಂಗ್ ಮಾಡಿಸಲು 120 ಕಿ.ಮೀ.ಅಂತರ ಹೋಗಬೇಕಾದ ದುಃಸ್ಥಿತಿ ಎದುರಾಗಿದೆ. ಇದೇ ರೀತಿ ಡಯಾಲಿಸಸ್, ಉತ್ತಮ ವೈದ್ಯಕೀಯ ಸೇವೆ ಪಡೆಯಲು ನೂರಾರು ಕಿ.ಮೀ. ತೆರಳಬೇಕಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಮತ್ತು ಚಾಮರಾಜನಗರ ನಾಯಕ ಸಂಘದ ಅಧ್ಯಕ್ಷರಾದ ಕೆಲ್ಲಂಬಳ್ಳಿ ಸೋಮನಾಯಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ನಿಧಿ ಮಾಜಿ ಅಧ್ಯಕ್ಷರಾದ ರಾಮಚಂದ್ರ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ, ಶ್ರೀನಿವಾಸನಾಯಕ, ಮಂಜುನಾಥ್, ವೆಂಕಟೇಶ್, ಚಿಕ್ಕಮಾದ ನಾಯಕ, ಶಾಂತಮೂರ್ತಿ, ಸದಸ್ಯರಾದ ರಾಧಾ, ಮಾದಪ್ಪ, ಪ್ರಸಾದ್, ಬಾಲು, ತಿರುಪತಿ, ರಾಚಪ್ಪ, ಮಣಿ ಸೇರಿದಂತೆ ನಾಯಕ ಸಮುದಾಯದ ಮುಖಂಡರು, ಯಜಮಾನರುಗಳು, ಯುವಕರು, ಸಾರ್ವಜನಿಕರು ಉಪಸ್ಥಿತರಿದ್ದರು.

andolanait

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

4 mins ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

8 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

11 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

13 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

15 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

18 mins ago