ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು.
ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ನಾಯಕ ಜನಾಂಗದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕ ಅನಾವರಣಗೊಳಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹರ್ಷಿಗಳ ತತ್ವ ಆದರ್ಶಗಳು ಅನುಕರಣೀಯ. ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಉನ್ನತ ಶಿಕ್ಷಣ ಹಾಗೂ ಐಎಎಸ್, ಕೆಎಎಸ್ ವಿದ್ಯಾಭ್ಯಾಸ ಮಾಡುವವರು ಇದ್ದರೆ ಅಂತಹವರಿಗೆ ನಾವು ಸಹಕಾರವನ್ನು ನೀಡುತ್ತೇವೆ. ಪ್ರಸ್ತುತ 21ನೇ ಶತಮಾನದಲ್ಲಿ ಕೂಡ ನಮ್ಮ ಮೂಲಭೂತ ಸೌಕರ್ಯಗಳನ್ನು ಪಡೆಯಲು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನತೆ ರಾಜಕೀಯಕ್ಕೆ ಕೊಡುವ ಒತ್ತನ್ನು ಅಭಿವೃದ್ಧಿಗೆ ಕೊಡಬೇಕು. ಕ್ಷೇತ್ರದ ಗೋಪಿನಾಥಮ್, ಮ.ಮ.ಬೆಟ್ಟ ಜನತೆ ಅದರಲ್ಲೂ ಗರ್ಭಿಣಿಯರು ಸ್ಕ್ಯಾನಿಂಗ್ ಮಾಡಿಸಲು 120 ಕಿ.ಮೀ.ಅಂತರ ಹೋಗಬೇಕಾದ ದುಃಸ್ಥಿತಿ ಎದುರಾಗಿದೆ. ಇದೇ ರೀತಿ ಡಯಾಲಿಸಸ್, ಉತ್ತಮ ವೈದ್ಯಕೀಯ ಸೇವೆ ಪಡೆಯಲು ನೂರಾರು ಕಿ.ಮೀ. ತೆರಳಬೇಕಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಮತ್ತು ಚಾಮರಾಜನಗರ ನಾಯಕ ಸಂಘದ ಅಧ್ಯಕ್ಷರಾದ ಕೆಲ್ಲಂಬಳ್ಳಿ ಸೋಮನಾಯಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ನಿಧಿ ಮಾಜಿ ಅಧ್ಯಕ್ಷರಾದ ರಾಮಚಂದ್ರ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ, ಶ್ರೀನಿವಾಸನಾಯಕ, ಮಂಜುನಾಥ್, ವೆಂಕಟೇಶ್, ಚಿಕ್ಕಮಾದ ನಾಯಕ, ಶಾಂತಮೂರ್ತಿ, ಸದಸ್ಯರಾದ ರಾಧಾ, ಮಾದಪ್ಪ, ಪ್ರಸಾದ್, ಬಾಲು, ತಿರುಪತಿ, ರಾಚಪ್ಪ, ಮಣಿ ಸೇರಿದಂತೆ ನಾಯಕ ಸಮುದಾಯದ ಮುಖಂಡರು, ಯಜಮಾನರುಗಳು, ಯುವಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…