ಜಿಲ್ಲೆಗಳು

ವಾಲ್ಮೀಕಿ ಜಯಂತಿಗೆ ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಹನೂರು: ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವ ಭಾವಿ ಸಭೆಯನ್ನು ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಜರುಗಿತು.

ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮುಖಂಡರುಗಳ ಅಭಿಪ್ರಾಯವನ್ನು ಕೇಳಲಾಯಿತು. ವಾಲ್ಮೀಕಿ ಸಮುದಾಯದ ಮುಖಂಡರುಗಳು, ಸರ್ಕಾರದಿಂದ ಆಚರಿಸಲಾಗುವ ವಾಲ್ಮೀಕಿ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ನಿರಂತರ ಧರಣಿ ನಡೆಸುತ್ತಿರುವ ಶ್ರೀ ಪ್ರಸನ್ನಂದಾಪುರಿ ಸ್ವಾಮೀಜಿ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ ಅಗೌರವ ತೋರಿದೆ ಈ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುವ ಜಯಂತಿಯನ್ನು ಬಹಿಷ್ಕರಿಸಿದ್ದೇವೆ ಎಂದರು.

ಶಾಸಕ ಆರ್. ನರೇಂದ್ರ ಅವರು ಮಾತನಾಡಿ, ಸರ್ಕಾರದ ಆದೇಶ ಹಾಗೂ ನಿರ್ದೇಶನದಂತೆ ನಾವು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಧಿಕಾರಿಗಳ ಜೊತೆಗೂಡಿ ಸರಳವಾಗಿಯಾದರು ಆಚರಿಸಿ ಮಹರ್ಷಿಗಳಿಗೆ ಗೌರವ ಸೂಚಿಸಲಾಹುವುದು,ಇದೇ ತಿಂಗಳ ಏಳನೇ ತಾರೀಕಿನಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಯಲ್ಲಿ ತೀರ್ಮಾನದ ನಂತರ ನೀವು ನೀಡುವ ಅಭಿಪ್ರಾಯದ ನಂತರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ ಆನಂದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್’ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ದೈಹಿಕ ಪರಿವೀಕ್ಷಕ ಮಹದೇವ್,ಪ ಪಂ ಆರೋಗ್ಯ ನಿರೀಕ್ಷಕ ಬಾಲಸುಬ್ರಮಣ್ಯ, ಎಎಸ್ ಐ ಕೃಷ್ಣ,ಕಂದಾಯ ನಿರೀಕ್ಷಕ ಮಹದೇವಸ್ವಾಮಿ ಗ್ರಾಮ ಲೆಕ್ಕಿಗ ಶೇಷಣ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಾಲ್ಮೀಕಿ ಸಮುದಾಯದ ವಿವಿಧ ಗ್ರಾಮಗಳ ಮುಖಂಡರುಗಳು ಉಪಸ್ಥಿತರಿದ್ದರು.

andolanait

Recent Posts

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

25 mins ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

55 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

1 hour ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

2 hours ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

6 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

6 hours ago