ಜಿಲ್ಲೆಗಳು

ವಾಲ್ಮೀಕಿ ಜಯಂತಿಗೆ ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಹನೂರು: ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವ ಭಾವಿ ಸಭೆಯನ್ನು ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಜರುಗಿತು.

ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮುಖಂಡರುಗಳ ಅಭಿಪ್ರಾಯವನ್ನು ಕೇಳಲಾಯಿತು. ವಾಲ್ಮೀಕಿ ಸಮುದಾಯದ ಮುಖಂಡರುಗಳು, ಸರ್ಕಾರದಿಂದ ಆಚರಿಸಲಾಗುವ ವಾಲ್ಮೀಕಿ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ನಿರಂತರ ಧರಣಿ ನಡೆಸುತ್ತಿರುವ ಶ್ರೀ ಪ್ರಸನ್ನಂದಾಪುರಿ ಸ್ವಾಮೀಜಿ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ ಅಗೌರವ ತೋರಿದೆ ಈ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುವ ಜಯಂತಿಯನ್ನು ಬಹಿಷ್ಕರಿಸಿದ್ದೇವೆ ಎಂದರು.

ಶಾಸಕ ಆರ್. ನರೇಂದ್ರ ಅವರು ಮಾತನಾಡಿ, ಸರ್ಕಾರದ ಆದೇಶ ಹಾಗೂ ನಿರ್ದೇಶನದಂತೆ ನಾವು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಧಿಕಾರಿಗಳ ಜೊತೆಗೂಡಿ ಸರಳವಾಗಿಯಾದರು ಆಚರಿಸಿ ಮಹರ್ಷಿಗಳಿಗೆ ಗೌರವ ಸೂಚಿಸಲಾಹುವುದು,ಇದೇ ತಿಂಗಳ ಏಳನೇ ತಾರೀಕಿನಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಯಲ್ಲಿ ತೀರ್ಮಾನದ ನಂತರ ನೀವು ನೀಡುವ ಅಭಿಪ್ರಾಯದ ನಂತರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ ಆನಂದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್’ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ದೈಹಿಕ ಪರಿವೀಕ್ಷಕ ಮಹದೇವ್,ಪ ಪಂ ಆರೋಗ್ಯ ನಿರೀಕ್ಷಕ ಬಾಲಸುಬ್ರಮಣ್ಯ, ಎಎಸ್ ಐ ಕೃಷ್ಣ,ಕಂದಾಯ ನಿರೀಕ್ಷಕ ಮಹದೇವಸ್ವಾಮಿ ಗ್ರಾಮ ಲೆಕ್ಕಿಗ ಶೇಷಣ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಾಲ್ಮೀಕಿ ಸಮುದಾಯದ ವಿವಿಧ ಗ್ರಾಮಗಳ ಮುಖಂಡರುಗಳು ಉಪಸ್ಥಿತರಿದ್ದರು.

andolanait

Recent Posts

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 mins ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

20 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

2 hours ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

2 hours ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

2 hours ago