ಹನೂರು: ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವ ಭಾವಿ ಸಭೆಯನ್ನು ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಜರುಗಿತು.
ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮುಖಂಡರುಗಳ ಅಭಿಪ್ರಾಯವನ್ನು ಕೇಳಲಾಯಿತು. ವಾಲ್ಮೀಕಿ ಸಮುದಾಯದ ಮುಖಂಡರುಗಳು, ಸರ್ಕಾರದಿಂದ ಆಚರಿಸಲಾಗುವ ವಾಲ್ಮೀಕಿ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ನಿರಂತರ ಧರಣಿ ನಡೆಸುತ್ತಿರುವ ಶ್ರೀ ಪ್ರಸನ್ನಂದಾಪುರಿ ಸ್ವಾಮೀಜಿ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ ಅಗೌರವ ತೋರಿದೆ ಈ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುವ ಜಯಂತಿಯನ್ನು ಬಹಿಷ್ಕರಿಸಿದ್ದೇವೆ ಎಂದರು.
ಶಾಸಕ ಆರ್. ನರೇಂದ್ರ ಅವರು ಮಾತನಾಡಿ, ಸರ್ಕಾರದ ಆದೇಶ ಹಾಗೂ ನಿರ್ದೇಶನದಂತೆ ನಾವು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಧಿಕಾರಿಗಳ ಜೊತೆಗೂಡಿ ಸರಳವಾಗಿಯಾದರು ಆಚರಿಸಿ ಮಹರ್ಷಿಗಳಿಗೆ ಗೌರವ ಸೂಚಿಸಲಾಹುವುದು,ಇದೇ ತಿಂಗಳ ಏಳನೇ ತಾರೀಕಿನಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಯಲ್ಲಿ ತೀರ್ಮಾನದ ನಂತರ ನೀವು ನೀಡುವ ಅಭಿಪ್ರಾಯದ ನಂತರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ ಆನಂದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್’ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ದೈಹಿಕ ಪರಿವೀಕ್ಷಕ ಮಹದೇವ್,ಪ ಪಂ ಆರೋಗ್ಯ ನಿರೀಕ್ಷಕ ಬಾಲಸುಬ್ರಮಣ್ಯ, ಎಎಸ್ ಐ ಕೃಷ್ಣ,ಕಂದಾಯ ನಿರೀಕ್ಷಕ ಮಹದೇವಸ್ವಾಮಿ ಗ್ರಾಮ ಲೆಕ್ಕಿಗ ಶೇಷಣ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಾಲ್ಮೀಕಿ ಸಮುದಾಯದ ವಿವಿಧ ಗ್ರಾಮಗಳ ಮುಖಂಡರುಗಳು ಉಪಸ್ಥಿತರಿದ್ದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…