ಪಿರಿಯಾಪಟ್ಟಣ : ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮುಗಿಸಿ ಬರುವ ವೇಳೆ ವ್ಯಾನ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಿದ್ದರಾಮಯ್ಯ ಅವರ ಅಭಿಮಾನಿ ಫಸಿ ಎಂಬಾತ ಸ್ಥಳದಲ್ಲಿಯೇ ನಿಧನರಾಗಿದ್ದಾರೆ.
ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಬಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಫಸಿ ನಿಧನರಾಗಿದ್ದು, ಇನ್ನಿಬ್ಬರು ತೀವ್ರ ರೀತಿಯಾಗಿ ಗಾಯಗೊಂಡು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.