ಮೈಸೂರು : ಗಾಯಿತ್ರಿ ಎಂಟರ್ ಪ್ರೈಸಸ್ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇವರುಗಳ ವತಿಯಿಂದ ಹಿರಿಯ ಕಲಾವಿದರೂ ಹಾಗೂ ಛಾಯಾಚಿತ್ರ ಪತ್ರಕರ್ತರೂ ಆದ ಎಸ್. ಎಂ. ಜಂಬುಕೇಶ್ವರ ಅವರು ರಚಿಸಿರುವ ʼವರ್ಣದಿಂದ ವಿಶ್ವದೆಡೆಗೆʼ ಕೃತಿಯನ್ನು ಆ. 12 ರಂದು ( ಶುಕ್ರವಾರ) ಲೋಕಾರ್ಪಣೆ ಮಅಡಲಾಗುತ್ತಿದೆ.
ಕೃತಿ ಬಿಡುಗಡೆ ಕಾರ್ಯಕ್ರಮವು ನಗರದ ಜೆ ಎಸ್ ಎಸ್ ಆಸ್ಪತ್ರೆಯ ಆವರಣದಲ್ಲಿರುವ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ʼವರ್ಣದಿಂದ ವಿಶ್ವದೆಡೆಗೆʼ ಕೃತಿಯು ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಬಿಡುಗಡೆಗೊಳಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರು ಹಾಗೂ ಮಾಜಿ ಸಚಿವರಾದ ಜಿ.ಟಿ,ದೇವೇಗೌಡ ರವರು ವಹಿಸಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಡಾ. ಎಂ. ಮಹ್ಮದ್ ಭಾಷ ರವರು ಕೃತಿ ಪರಿಚಯ ಮಾಡಲಿದ್ದಾರೆ.ಪ್ರಾಸ್ತಾವಿಕ ನುಡಿಗಳನ್ನು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷರಾದ ಎಂ.ಚಂದ್ರಶೇಖರ್ ಅವರು ಆಡಲಿದ್ದಾರೆ.
ಅಂದಿನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಾಶಕರಾದ ಎಂ.ಎನ್. ಕಾರ್ತಿಕ್ ಅವರು ತಿಳಿಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…