ಜಿಲ್ಲೆಗಳು

ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದಲ್ಲಿ ವರುಣನ ಅವಾಂತರ : ಮಡಿಕೇರಿ-ಮಂಗಳೂರು ಹೆದ್ದಾರಿ ಸಂಪರ್ಕ ಕಡಿತ

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ವರುಣ ಅವಾಂತರ ಸೃಷಿಸಿದೆ.
ಧಾರಾಕಾರ ಮಳೆಯಿಂದ ಪಯಸ್ವಿನಿ ನದಿ ಉಕ್ಕಿ ಹರಿದಿದ್ದು, ಕೆಲ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದ ಪರಿಣಾಮ ಸ್ಥಳೀಯ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ರಾತ್ರಿಯೇ ಸ್ಥಳಾಂತರಗೊಂಡರು. ಅಲ್ಲದೆ, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೇಲೂ ನೀರು ಹರಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು.


ಕೊಯನಾಡು ಬಳಿ ಸೇತುವೆಯ ಒಂದು ಬದಿ ಕುಸಿಯಲಾರಂಭಿಸಿದ್ದು, ಹೆದ್ದಾರಿ ಸಂಚಾರ ಬಂದ್ ಆಗುವ ಭೀತಿ ಎದುರಾಗಿದೆ. ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಆತಂಕದ ನಡುವೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊಯನಾಡಿನ ಕೆಲ ಕುಟುಂಬಗಳನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಕೊಯನಾಡು-ದೇವರಕೊಲ್ಲಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮತ್ತೆ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ.
ಸಂಪಾಜೆಯ ಜೀಡ್ಲ, ಅರೆಕಲ್ಲು ಪ್ರದೇಶದಲ್ಲೂ ಭಾರೀ ಮಳೆಯಾಗಿದೆ. ಇಲ್ಲಿನ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಪಾಲಡ, ಅರಂಬೂರಿನಲ್ಲಿ ಹೆದ್ದಾರಿಯ ಮೇಲೆ ನೀರು ಹರಿದಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಉಂಬಳೆ ಕಟ್ವಪಲ್ಲಿ ಬಳಿ ರಸ್ತೆ ಮೇಲೆ ಮಣ್ಣು ಕುಸಿದಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಅರಂಬೂರು, ಪಾಲಡ್ಕ, ಪೆರಾಜೆ ಹೆದ್ದಾರಿಗಳಲ್ಲೂ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.


ಇನ್ನು ಅರೆಕಲ್ಲು ಗ್ರಾಮದ ದಟ್ಟಾರಣ್ಯದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಬೃಹತ್ತಾದ ಬೆಟ್ಟದ ಮೇಲಿಂದ ಮರ, ಕಲ್ಲು, ಕೆಸರುಮಿಶ್ರಿತ ನೀರು ಕೊಚ್ಚಿಕೊಂಡು ಬಂದಿದೆ. ಈ ಭಾಗದಲ್ಲಿ ಮಳೆ ಕಡಿಮೆಯಾದರೂ ಭೂಕುಸಿತ ಉಂಟಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಘಟನೆಯಿಂದ ಅರೆಕಲ್ಲು ಗ್ರಾಮದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ದಬ್ಬಡ್ಕದಲ್ಲಿ ಸುಮಾರು ಅರ್ಧ ಎಕರೆಯಷ್ಟು ರಬ್ಬರ್ ತೋಟ ಕುಸಿದಿದೆ. ಅಲ್ಲದೆ, ದಬ್ಬಡ್ಕ ಕೊಪ್ಪದ ಬಾಲಕೃಷ್ಣ ಎಂಬವರ ಮನೆಗೆ ಹಾನಿಯಾಗಿದ್ದು, ಅಪಾಯದ ಮುನ್ಸೂಚನೆ ದೊರೆತ ಹಿನ್ನೆಲೆ ಮನೆಯವರು ಸುರಕ್ಷಿತ ಸ್ಥಳಗಳಿಗೆ ತೆರಳಿ ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಎನ್‌ಡಿಆರ್‌ಎಫ್ ತಂಡ ಭೇಟಿ ನೀಡಿ ಪರಿಶೀಲಿಸಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ೨೪ ಗಂಟೆ ಅವಧಿಯಲ್ಲಿ ೫೮.೨೬ ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೧೫.೯೮ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೦೭೨.೫೯ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೧೭೪೦.೧೯ ಮಿ.ಮೀ ಮಳೆಯಾಗಿತ್ತು.


ಮಡಿಕೇರಿ ತಾಲ್ಲೂಕಿನಲ್ಲಿ ೯೩.೮೫ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೪೦.೧೫ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೪೦.೭೭ ಮಿ.ಮೀ. ಸರಾಸರಿ ಮಳೆಯಾಗಿದೆ. ಮಡಿಕೇರಿ ಕಸಬಾ ೬೬.೬೦, ನಾಪೋಕ್ಲು ೩೦.೨೦, ಸಂಪಾಜೆ ೧೭೦, ಭಾಗಮಂಡಲ ೧೦೮.೬೦, ವಿರಾಜಪೇಟೆ ಕಸಬಾ ೧೦೦.೪೦, ಹುದಿಕೇರಿ ೧೯, ಶ್ರೀಮಂಗಲ ೧೨, ಪೊನ್ನಂಪೇಟೆ ೪೦, ಅಮ್ಮತ್ತಿ ೨೨, ಬಾಳೆಲೆ ೪೭.೫೦, ಸೋಮವಾರಪೇಟೆ ಕಸಬಾ ೫೦.೮೦, ಶನಿವಾರಸಂತೆ ೩೦.೪೦, ಶಾಂತಳ್ಳಿ ೭೯, ಕೊಡ್ಲಿಪೇಟೆ ೪೩.೨೦, ಕುಶಾಲನಗರ ೫, ಸುಂಟಿಕೊಪ್ಪ ೩೬.೨೦ ಮಿ.ಮೀ. ಮಳೆಯಾಗಿದೆ.

andolanait

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

2 hours ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

2 hours ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

2 hours ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

10 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

14 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago