ಮೈಸೂರು-ನಂಜನಗೂಡು ಗೆಜ್ಜಗಳ್ಳಿ ಬಳಿಯ ನಾಲೆಯಲ್ಲಿ ನೀರು ಪೋಲು: ಅಧಿಕಾರಿಗಳ ನಿರ್ಲಕ್ಷ್ಯ
ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ವರುಣ ನಾಲೆ ಮೇಲ್ಸೇತುವೆಯಲ್ಲಿ(ಅಕ್ವಡೆಟ್) ನೀರು ಸೋರಿಕೆಯಾಗುತ್ತಿದ್ದು, ಇದರಿಂದ ಅನಗತ್ಯವಾಗಿ ನೀರು ಪೋಲಾಗುತ್ತಿದೆ.
ಪ್ರತಿವರ್ಷ ನೀರು ಬಿಟ್ಟ ಸಮಯದಲ್ಲಿ ಹೀಗೆ ಸೋರಿಕೆಯಾಗುವುದು ಮಾಮೂಲಿಯಂತಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸದೆ ಕಂಡೂ ಕಾಣದಂತೆ ಇದ್ದಾರೆ. ಅಧಿಕಾರಿಗಳ ಈ ವರ್ತನೆಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಟ್ಟು ೧೨೬ ಕಿ.ಮೀ. ಉದ್ದದ ನಾಲೆ ಕೆಆರ್ಎಸ್ನಿಂದ ಆರಂಭವಾಗಿ ಬೆಂಗಳೂರು-ಮೈಸೂರು ರಸ್ತೆಯ ಸಿದ್ದಲಿಂಗಪುರ ಹಾಗೂ ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಮಾರ್ಗವಾಗಿದ್ದು, ೧.೮ ಕಿ.ಮೀ. ನಾಲೆಯೂ ಮೇಲ್ಸೇತುವೇ ಮಾದರಿಯಲ್ಲಿದೆ. ಸದ್ಯ ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ನಾಲೆಯ ಜಾಯಿಂಟ್ನಿಂದ ಜೂನ್ನಲ್ಲಿ ಸೋರಲಾರಂಭಿಸಿರುವ ನೀರು ಇನ್ನು ಸೋರಿಕೆಯಾಗುತ್ತಲೆ ಇದೆ.
ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಈ ನೀರಾವರಿ ಯೋಜನೆ ಮಾಡಲಾಯಿತು. ನಂತರ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದಾಗ ನಾಲೆ ಮೇಲ್ಸೇತುವೆಯನ್ನು ಮಾಡಲಾಯಿತು. ಈ ವೇಳೆ ಎಚ್.ಕೆ.ಪಾಟೀಲರು ನೀರಾವರಿ ಮಂತ್ರಿಯಾಗಿದ್ದರು. ಈ ನಾಲೆ ಮೇಲ್ಸೇತುವೆಯಾಗಿ ಸುಮಾರು ೨೦ ವರ್ಷಗಳೇ ಕಳೆದಿದ್ದು, ನಿರಂತರವಾಗಿ ನೀರು ಹರಿಯುವ ಕಾರಣ ನಾಲೆಯ ಜಾಯಿಂಟ್ಗಳಿಗೆ ಅಳವಡಿಸಿರುವ ಕೊಂಡಿಗಳು ಹಾಳಾಗಿವೆ. ಹೀಗೆ ಬಹುತೇಕ ಕಡೆಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಗೆಜ್ಜಗಳ್ಳಿ ಬಳಿಯ ಮೇಲ್ಸೇತುವೆಯಲ್ಲಿ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಆದರೆ, ಇದನ್ನು ಸರಿಪಡಿಸುವ ಕೆಲಸ ಸರಿಯಾಗಿ ಆಗಿಲ್ಲ.
ನೀರು ಬಿಟ್ಟಾಗೆಲ್ಲ ಸೋರಿಕೆ: ನಾನು ಸುಮಾರು ಎರಡು ವರ್ಷಗಳಿಂದ ನೋಡುತ್ತಿದ್ದೇನೆ. ನೀರು ಬಿಟ್ಟಾಗೆಲ್ಲ ನೀರು ಸೋರಿಕೆಯಾಗುತ್ತಿದೆ. ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತಂದು ನೀರಿನ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರಗಳಿಗೆ ಹೀಗೆ ನೀರು ಪೋಲಾಗುವುದು ಕಾಣುವುದಿಲ್ಲವೇ? ಶೀಘ್ರ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಹವ್ಯಾಸಿ ಹವಮಾನ ಪರಿವೀಕ್ಷಕ ರವಿಕೀರ್ತಿ.
ವಾಹನಗಳು ಸಂಚಾರ ಮಾಡುವ ಕಾರಣ ಒತ್ತಡದಿಂದ ಸ್ವಲ್ಪ ಶೇಕ್ ಆಗುತ್ತದೆ. ಹೀಗಾಗಿ ಅಲ್ಲಿನ ಜಾಯಿಂಟ್ಗೆ ಅಳವಡಿಸಿರುವ ಕೊಂಡಿಯ ರಬ್ಬರ್ ಸಡಿಲವಾಗಿ ಈ ಜಾಗದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿದೆ. ಕಳೆದ ವರ್ಷವೂ ದುರಸ್ತಿ ಮಾಡಲಾಗಿತ್ತು. ಡಿಸೆಂಬರ್ಗೆ ನೀರು ನಿಲ್ಲಿಸಿದ ನಂತರ ಇದನ್ನು ಸರಿಪಡಿಸಲಾಗುವುದು.
-ಎಂ.ಎಸ್.ಜಸ್ವಂತ್, ಎಇಇ, ವರುಣ ವಿಭಾಗ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…