ಜಿಲ್ಲೆಗಳು

ವರುಣ ನಾಲೆ ಮೇಲ್ಸೇತುವೆಯಲ್ಲಿ ನೀರು ಸೋರಿಕೆ

ಮೈಸೂರು-ನಂಜನಗೂಡು ಗೆಜ್ಜಗಳ್ಳಿ ಬಳಿಯ ನಾಲೆಯಲ್ಲಿ ನೀರು ಪೋಲು: ಅಧಿಕಾರಿಗಳ ನಿರ್ಲಕ್ಷ್ಯ
ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ವರುಣ ನಾಲೆ ಮೇಲ್ಸೇತುವೆಯಲ್ಲಿ(ಅಕ್ವಡೆಟ್) ನೀರು ಸೋರಿಕೆಯಾಗುತ್ತಿದ್ದು, ಇದರಿಂದ ಅನಗತ್ಯವಾಗಿ ನೀರು ಪೋಲಾಗುತ್ತಿದೆ.
ಪ್ರತಿವರ್ಷ ನೀರು ಬಿಟ್ಟ ಸಮಯದಲ್ಲಿ ಹೀಗೆ ಸೋರಿಕೆಯಾಗುವುದು ಮಾಮೂಲಿಯಂತಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸದೆ ಕಂಡೂ ಕಾಣದಂತೆ ಇದ್ದಾರೆ. ಅಧಿಕಾರಿಗಳ ಈ ವರ್ತನೆಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಟ್ಟು ೧೨೬ ಕಿ.ಮೀ. ಉದ್ದದ ನಾಲೆ ಕೆಆರ್‌ಎಸ್‌ನಿಂದ ಆರಂಭವಾಗಿ ಬೆಂಗಳೂರು-ಮೈಸೂರು ರಸ್ತೆಯ ಸಿದ್ದಲಿಂಗಪುರ ಹಾಗೂ ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಮಾರ್ಗವಾಗಿದ್ದು, ೧.೮ ಕಿ.ಮೀ. ನಾಲೆಯೂ ಮೇಲ್ಸೇತುವೇ ಮಾದರಿಯಲ್ಲಿದೆ. ಸದ್ಯ ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ನಾಲೆಯ ಜಾಯಿಂಟ್‌ನಿಂದ ಜೂನ್‌ನಲ್ಲಿ ಸೋರಲಾರಂಭಿಸಿರುವ ನೀರು ಇನ್ನು ಸೋರಿಕೆಯಾಗುತ್ತಲೆ ಇದೆ.
ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಈ ನೀರಾವರಿ ಯೋಜನೆ ಮಾಡಲಾಯಿತು. ನಂತರ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದಾಗ ನಾಲೆ ಮೇಲ್ಸೇತುವೆಯನ್ನು ಮಾಡಲಾಯಿತು. ಈ ವೇಳೆ ಎಚ್.ಕೆ.ಪಾಟೀಲರು ನೀರಾವರಿ ಮಂತ್ರಿಯಾಗಿದ್ದರು. ಈ ನಾಲೆ ಮೇಲ್ಸೇತುವೆಯಾಗಿ ಸುಮಾರು ೨೦ ವರ್ಷಗಳೇ ಕಳೆದಿದ್ದು, ನಿರಂತರವಾಗಿ ನೀರು ಹರಿಯುವ ಕಾರಣ ನಾಲೆಯ ಜಾಯಿಂಟ್‌ಗಳಿಗೆ ಅಳವಡಿಸಿರುವ ಕೊಂಡಿಗಳು ಹಾಳಾಗಿವೆ. ಹೀಗೆ ಬಹುತೇಕ ಕಡೆಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಗೆಜ್ಜಗಳ್ಳಿ ಬಳಿಯ ಮೇಲ್ಸೇತುವೆಯಲ್ಲಿ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಆದರೆ, ಇದನ್ನು ಸರಿಪಡಿಸುವ ಕೆಲಸ ಸರಿಯಾಗಿ ಆಗಿಲ್ಲ.
ನೀರು ಬಿಟ್ಟಾಗೆಲ್ಲ ಸೋರಿಕೆ: ನಾನು ಸುಮಾರು ಎರಡು ವರ್ಷಗಳಿಂದ ನೋಡುತ್ತಿದ್ದೇನೆ. ನೀರು ಬಿಟ್ಟಾಗೆಲ್ಲ ನೀರು ಸೋರಿಕೆಯಾಗುತ್ತಿದೆ. ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತಂದು ನೀರಿನ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರಗಳಿಗೆ ಹೀಗೆ ನೀರು ಪೋಲಾಗುವುದು ಕಾಣುವುದಿಲ್ಲವೇ? ಶೀಘ್ರ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಹವ್ಯಾಸಿ ಹವಮಾನ ಪರಿವೀಕ್ಷಕ ರವಿಕೀರ್ತಿ.


ವಾಹನಗಳು ಸಂಚಾರ ಮಾಡುವ ಕಾರಣ ಒತ್ತಡದಿಂದ ಸ್ವಲ್ಪ ಶೇಕ್ ಆಗುತ್ತದೆ. ಹೀಗಾಗಿ ಅಲ್ಲಿನ ಜಾಯಿಂಟ್‌ಗೆ ಅಳವಡಿಸಿರುವ ಕೊಂಡಿಯ ರಬ್ಬರ್ ಸಡಿಲವಾಗಿ ಈ ಜಾಗದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿದೆ. ಕಳೆದ ವರ್ಷವೂ ದುರಸ್ತಿ ಮಾಡಲಾಗಿತ್ತು. ಡಿಸೆಂಬರ್‌ಗೆ ನೀರು ನಿಲ್ಲಿಸಿದ ನಂತರ ಇದನ್ನು ಸರಿಪಡಿಸಲಾಗುವುದು.
-ಎಂ.ಎಸ್.ಜಸ್ವಂತ್, ಎಇಇ, ವರುಣ ವಿಭಾಗ.

andolanait

Recent Posts

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

30 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

32 mins ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

34 mins ago

ಕಡಂಗಮರೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…

39 mins ago

ಗುಂಡ್ಲುಪೇಟೆ: ಟಿಪ್ಪರ್‌ಗಳಿಗೆ ಬೀಳಬೇಕಿದೆ ಬ್ರೇಕ್

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…

45 mins ago