ಜಿಲ್ಲೆಗಳು

ವರುಣ ನಾಲೆ ಮೇಲ್ಸೇತುವೆಯಲ್ಲಿ ನೀರು ಸೋರಿಕೆ

ಮೈಸೂರು-ನಂಜನಗೂಡು ಗೆಜ್ಜಗಳ್ಳಿ ಬಳಿಯ ನಾಲೆಯಲ್ಲಿ ನೀರು ಪೋಲು: ಅಧಿಕಾರಿಗಳ ನಿರ್ಲಕ್ಷ್ಯ
ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ವರುಣ ನಾಲೆ ಮೇಲ್ಸೇತುವೆಯಲ್ಲಿ(ಅಕ್ವಡೆಟ್) ನೀರು ಸೋರಿಕೆಯಾಗುತ್ತಿದ್ದು, ಇದರಿಂದ ಅನಗತ್ಯವಾಗಿ ನೀರು ಪೋಲಾಗುತ್ತಿದೆ.
ಪ್ರತಿವರ್ಷ ನೀರು ಬಿಟ್ಟ ಸಮಯದಲ್ಲಿ ಹೀಗೆ ಸೋರಿಕೆಯಾಗುವುದು ಮಾಮೂಲಿಯಂತಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸದೆ ಕಂಡೂ ಕಾಣದಂತೆ ಇದ್ದಾರೆ. ಅಧಿಕಾರಿಗಳ ಈ ವರ್ತನೆಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಟ್ಟು ೧೨೬ ಕಿ.ಮೀ. ಉದ್ದದ ನಾಲೆ ಕೆಆರ್‌ಎಸ್‌ನಿಂದ ಆರಂಭವಾಗಿ ಬೆಂಗಳೂರು-ಮೈಸೂರು ರಸ್ತೆಯ ಸಿದ್ದಲಿಂಗಪುರ ಹಾಗೂ ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಮಾರ್ಗವಾಗಿದ್ದು, ೧.೮ ಕಿ.ಮೀ. ನಾಲೆಯೂ ಮೇಲ್ಸೇತುವೇ ಮಾದರಿಯಲ್ಲಿದೆ. ಸದ್ಯ ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ನಾಲೆಯ ಜಾಯಿಂಟ್‌ನಿಂದ ಜೂನ್‌ನಲ್ಲಿ ಸೋರಲಾರಂಭಿಸಿರುವ ನೀರು ಇನ್ನು ಸೋರಿಕೆಯಾಗುತ್ತಲೆ ಇದೆ.
ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಈ ನೀರಾವರಿ ಯೋಜನೆ ಮಾಡಲಾಯಿತು. ನಂತರ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದಾಗ ನಾಲೆ ಮೇಲ್ಸೇತುವೆಯನ್ನು ಮಾಡಲಾಯಿತು. ಈ ವೇಳೆ ಎಚ್.ಕೆ.ಪಾಟೀಲರು ನೀರಾವರಿ ಮಂತ್ರಿಯಾಗಿದ್ದರು. ಈ ನಾಲೆ ಮೇಲ್ಸೇತುವೆಯಾಗಿ ಸುಮಾರು ೨೦ ವರ್ಷಗಳೇ ಕಳೆದಿದ್ದು, ನಿರಂತರವಾಗಿ ನೀರು ಹರಿಯುವ ಕಾರಣ ನಾಲೆಯ ಜಾಯಿಂಟ್‌ಗಳಿಗೆ ಅಳವಡಿಸಿರುವ ಕೊಂಡಿಗಳು ಹಾಳಾಗಿವೆ. ಹೀಗೆ ಬಹುತೇಕ ಕಡೆಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಗೆಜ್ಜಗಳ್ಳಿ ಬಳಿಯ ಮೇಲ್ಸೇತುವೆಯಲ್ಲಿ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಆದರೆ, ಇದನ್ನು ಸರಿಪಡಿಸುವ ಕೆಲಸ ಸರಿಯಾಗಿ ಆಗಿಲ್ಲ.
ನೀರು ಬಿಟ್ಟಾಗೆಲ್ಲ ಸೋರಿಕೆ: ನಾನು ಸುಮಾರು ಎರಡು ವರ್ಷಗಳಿಂದ ನೋಡುತ್ತಿದ್ದೇನೆ. ನೀರು ಬಿಟ್ಟಾಗೆಲ್ಲ ನೀರು ಸೋರಿಕೆಯಾಗುತ್ತಿದೆ. ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತಂದು ನೀರಿನ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರಗಳಿಗೆ ಹೀಗೆ ನೀರು ಪೋಲಾಗುವುದು ಕಾಣುವುದಿಲ್ಲವೇ? ಶೀಘ್ರ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಹವ್ಯಾಸಿ ಹವಮಾನ ಪರಿವೀಕ್ಷಕ ರವಿಕೀರ್ತಿ.


ವಾಹನಗಳು ಸಂಚಾರ ಮಾಡುವ ಕಾರಣ ಒತ್ತಡದಿಂದ ಸ್ವಲ್ಪ ಶೇಕ್ ಆಗುತ್ತದೆ. ಹೀಗಾಗಿ ಅಲ್ಲಿನ ಜಾಯಿಂಟ್‌ಗೆ ಅಳವಡಿಸಿರುವ ಕೊಂಡಿಯ ರಬ್ಬರ್ ಸಡಿಲವಾಗಿ ಈ ಜಾಗದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿದೆ. ಕಳೆದ ವರ್ಷವೂ ದುರಸ್ತಿ ಮಾಡಲಾಗಿತ್ತು. ಡಿಸೆಂಬರ್‌ಗೆ ನೀರು ನಿಲ್ಲಿಸಿದ ನಂತರ ಇದನ್ನು ಸರಿಪಡಿಸಲಾಗುವುದು.
-ಎಂ.ಎಸ್.ಜಸ್ವಂತ್, ಎಇಇ, ವರುಣ ವಿಭಾಗ.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago