ಜಿಲ್ಲೆಗಳು

ವರುಣ ನಾಲೆ ಮೇಲ್ಸೇತುವೆಯಲ್ಲಿ ನೀರು ಸೋರಿಕೆ

ಮೈಸೂರು-ನಂಜನಗೂಡು ಗೆಜ್ಜಗಳ್ಳಿ ಬಳಿಯ ನಾಲೆಯಲ್ಲಿ ನೀರು ಪೋಲು: ಅಧಿಕಾರಿಗಳ ನಿರ್ಲಕ್ಷ್ಯ
ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ವರುಣ ನಾಲೆ ಮೇಲ್ಸೇತುವೆಯಲ್ಲಿ(ಅಕ್ವಡೆಟ್) ನೀರು ಸೋರಿಕೆಯಾಗುತ್ತಿದ್ದು, ಇದರಿಂದ ಅನಗತ್ಯವಾಗಿ ನೀರು ಪೋಲಾಗುತ್ತಿದೆ.
ಪ್ರತಿವರ್ಷ ನೀರು ಬಿಟ್ಟ ಸಮಯದಲ್ಲಿ ಹೀಗೆ ಸೋರಿಕೆಯಾಗುವುದು ಮಾಮೂಲಿಯಂತಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸದೆ ಕಂಡೂ ಕಾಣದಂತೆ ಇದ್ದಾರೆ. ಅಧಿಕಾರಿಗಳ ಈ ವರ್ತನೆಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಟ್ಟು ೧೨೬ ಕಿ.ಮೀ. ಉದ್ದದ ನಾಲೆ ಕೆಆರ್‌ಎಸ್‌ನಿಂದ ಆರಂಭವಾಗಿ ಬೆಂಗಳೂರು-ಮೈಸೂರು ರಸ್ತೆಯ ಸಿದ್ದಲಿಂಗಪುರ ಹಾಗೂ ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಮಾರ್ಗವಾಗಿದ್ದು, ೧.೮ ಕಿ.ಮೀ. ನಾಲೆಯೂ ಮೇಲ್ಸೇತುವೇ ಮಾದರಿಯಲ್ಲಿದೆ. ಸದ್ಯ ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ನಾಲೆಯ ಜಾಯಿಂಟ್‌ನಿಂದ ಜೂನ್‌ನಲ್ಲಿ ಸೋರಲಾರಂಭಿಸಿರುವ ನೀರು ಇನ್ನು ಸೋರಿಕೆಯಾಗುತ್ತಲೆ ಇದೆ.
ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಈ ನೀರಾವರಿ ಯೋಜನೆ ಮಾಡಲಾಯಿತು. ನಂತರ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದಾಗ ನಾಲೆ ಮೇಲ್ಸೇತುವೆಯನ್ನು ಮಾಡಲಾಯಿತು. ಈ ವೇಳೆ ಎಚ್.ಕೆ.ಪಾಟೀಲರು ನೀರಾವರಿ ಮಂತ್ರಿಯಾಗಿದ್ದರು. ಈ ನಾಲೆ ಮೇಲ್ಸೇತುವೆಯಾಗಿ ಸುಮಾರು ೨೦ ವರ್ಷಗಳೇ ಕಳೆದಿದ್ದು, ನಿರಂತರವಾಗಿ ನೀರು ಹರಿಯುವ ಕಾರಣ ನಾಲೆಯ ಜಾಯಿಂಟ್‌ಗಳಿಗೆ ಅಳವಡಿಸಿರುವ ಕೊಂಡಿಗಳು ಹಾಳಾಗಿವೆ. ಹೀಗೆ ಬಹುತೇಕ ಕಡೆಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಗೆಜ್ಜಗಳ್ಳಿ ಬಳಿಯ ಮೇಲ್ಸೇತುವೆಯಲ್ಲಿ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಆದರೆ, ಇದನ್ನು ಸರಿಪಡಿಸುವ ಕೆಲಸ ಸರಿಯಾಗಿ ಆಗಿಲ್ಲ.
ನೀರು ಬಿಟ್ಟಾಗೆಲ್ಲ ಸೋರಿಕೆ: ನಾನು ಸುಮಾರು ಎರಡು ವರ್ಷಗಳಿಂದ ನೋಡುತ್ತಿದ್ದೇನೆ. ನೀರು ಬಿಟ್ಟಾಗೆಲ್ಲ ನೀರು ಸೋರಿಕೆಯಾಗುತ್ತಿದೆ. ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತಂದು ನೀರಿನ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರಗಳಿಗೆ ಹೀಗೆ ನೀರು ಪೋಲಾಗುವುದು ಕಾಣುವುದಿಲ್ಲವೇ? ಶೀಘ್ರ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಹವ್ಯಾಸಿ ಹವಮಾನ ಪರಿವೀಕ್ಷಕ ರವಿಕೀರ್ತಿ.


ವಾಹನಗಳು ಸಂಚಾರ ಮಾಡುವ ಕಾರಣ ಒತ್ತಡದಿಂದ ಸ್ವಲ್ಪ ಶೇಕ್ ಆಗುತ್ತದೆ. ಹೀಗಾಗಿ ಅಲ್ಲಿನ ಜಾಯಿಂಟ್‌ಗೆ ಅಳವಡಿಸಿರುವ ಕೊಂಡಿಯ ರಬ್ಬರ್ ಸಡಿಲವಾಗಿ ಈ ಜಾಗದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿದೆ. ಕಳೆದ ವರ್ಷವೂ ದುರಸ್ತಿ ಮಾಡಲಾಗಿತ್ತು. ಡಿಸೆಂಬರ್‌ಗೆ ನೀರು ನಿಲ್ಲಿಸಿದ ನಂತರ ಇದನ್ನು ಸರಿಪಡಿಸಲಾಗುವುದು.
-ಎಂ.ಎಸ್.ಜಸ್ವಂತ್, ಎಇಇ, ವರುಣ ವಿಭಾಗ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

12 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

19 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

19 hours ago