ಜಿಲ್ಲೆಗಳು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ

ಮೈಸೂರು: ವೀರಪ್ಪನ್ ಸಹಚರ, ಪಾಲಾರ್ ಬಾಂಬ್ ಸ್ಟೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜ್ಞಾನಪ್ರಕಾಶ್ ಅವರನ್ನು ಅನಾರೋಗ್ಯ ಕಾರಣದಿಂದ ಜಾಮೀನ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇದ್ದ ಇವರು ಶ್ವಾಸಕೋಶದ ಕ್ಯಾನ್ಸರ್ ಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಾನವೀಯತೆಯ ಆಧಾರದ ಮೇಲೆ ನ.26 ರಂದು ಜಾಮೀನು ನೀಡಿತ್ತು. ಆ ನಂತರ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಅವರನ್ನು ಮೈಸೂರು ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ‌.

ಪಾಲಾರ್ ಬಾಂಬ್ ಸ್ಫೋಟ ಪ್ರಕರಣ

ಪಾಲಾರ್, ಮಹದೇಶ್ವರ ಬೆಟ್ಟಕ್ಕೆ ಹೊಂದಿಕೊಂಡಿರುವ ಗ್ರಾಮ. ಇದರ ಸುತ್ತಮುತ್ತ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ ವೀರಪ್ಪನ್ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದ. 1993 ರ ಏಪ್ರಿಲ್ 9 ರಂದು ತಮಿಳುನಾಡಿನ ಅಂದಿನ ಎಸ್‌ಟಿಎಫ್ ಮುಖ್ಯಸ್ಥರಾಗಿದ್ದ ಗೋಪಾಲಕೃಷ್ಣ ಮತ್ತು ಅವರ ತಂಡದ ಮೇಲೆ ವೀರಪ್ಪನ್ ಸಹಚರರು ದಾಳಿ ನಡೆಸಲು ಸಂಚು ರೂಪಿಸಿದ್ದರು. ಸಾಕಷ್ಟು ಬಾಂಬ್‌ಗಳನ್ನು ಸಂಗ್ರಹಿಸಿಟ್ಟಿದ್ದ ವೀರಪ್ಪನ್ ಸಹಚರರು ಪಾಲಾರ್ ಸಮೀಪದ ಸೊರೆಕಾಯಿಪಟ್ಟಿ ಬಳಿ ನೆಲಬಾಂಬ್ ಹೂತಿಟ್ಟಿದ್ದರು.

ಗೋಪಾಲ್‌ಕೃಷ್ಣ ಅವರನ್ನು ಒಳಗೊಂಡ ವಿಶೇಷ ತಂಡ ಮಾಹಿತಿದಾರರ ಜೊತೆ ತಮಿಳುನಾಡು ಗಡಿ ಭಾಗದಲ್ಲಿರುವ ಪಾಲಾರ್‌ನತ್ತ ಹೊರಟಿತು. ಸೈಮನ್ ಸಿಡಿಸಿದ ನೆಲಬಾಂಬ್‌ನಿಂದ 22 ಮಂದಿ ಮೃತಪಟ್ಟು,  ಹಲವಾರು ಮಂದಿ ಗಾಯಗೊಂಡಿದ್ದರು.

ಘಟನೆ ನಂತರ ವೀರಪ್ಪನ್ ಸೇರಿದಂತೆ 124 ಮಂದಿ ಸಹಚರರ ವಿರುದ್ಧ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಲಾಗಿತ್ತು. ಅಂದಿನ ಎಸ್‌ಟಿಎಫ್ ಮುಖ್ಯಸ್ಥರಾಗಿದ್ದ ಶಂಕರ ಬಿದರಿ ಅವರು ವೀರಪ್ಪನ್ ಸೆರೆಗಾಗಿ ತಮ್ಮ ತಂಡದೊಂದಿಗೆ ಮಲೈ ಮಹದೇಶ್ವರ ಬೆಟ್ಟದ ಸುತ್ತ ಕಾರ್ಯಾಚರಣೆ ತೀವ್ರಗೊಳಿಸಿ, ಮೂರು ತಿಂಗಳ ಬಳಿಕ ವೀರಪ್ಪನ್ ಸಹಚರರಾದ ಮೀಸೆಕಾರ ಮಾದಯ್ಯ, ಜ್ಞಾನ ಪ್ರಕಾಶ್, ಸೈಮನ್ ಮತ್ತು ಬಿಲವೇಂದ್ರನ್ ಅವರನ್ನು ಬಂಧಿಸಲಾಗಿತ್ತು.

 

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

8 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

8 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

8 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

8 hours ago